2:37 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಚಂದ್ರಗಿರಿಯ ತೀರದಲ್ಲಿ’ ಖ್ಯಾತಿಯ ಪ್ರಸಿದ್ಧ ಸಾಹಿತಿ ಸಾರಾ ಅಬೂಬಕ್ಕರ್ ಇನ್ನಿಲ್ಲ

10/01/2023, 19:42

ಮಂಗಳೂರು(reporterkarnataka.com): ಪ್ರಸಿದ್ಧ ಕಾದಂಬರಿಗಾರ್ತಿ ಸಾರಾ ಅಬೂಬಕ್ಕರ್ (87) ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಮಂಗಳವಾರ ಅವರು ಕೊನೆಯುಸಿರೆಳೆದರು ಎಂದು ಆಪ್ತ ಮೂಲಗಳು ತಿಳಿಸಿವೆ.
ಚಂದ್ರಗಿರಿ ತೀರದಲ್ಲಿ ಕಾದಂಬರಿ ಮೂಲಕ ಸಾರಾ ಅಬೂಬಕ್ಕರ್ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರವರ್ಧಮಾನಕ್ಕೆ ಬಂದಿದ್ದರು. ಲಂಕೇಶ್ ಪತ್ರಿಕೆಯಲ್ಲಿ ಅವರ ಚಂದ್ರಗಿರಿಯ ತೀರದಲ್ಲಿ ಕಾದಂಬರಿ ಧಾರಾವಾಹಿ ರೂಪದಲ್ಲಿ ಪ್ರಕಟವಾಗುತ್ತಿತ್ತು.

ಕಾಸರಗೋಡು ಜಿಲ್ಲೆಯ ‘ಪುದಿಯಾಪುರ್’ ತರವಾಡು ಮನೆಯಲ್ಲಿ ಪಿ. ಅಹ್ಮದ್ ಮತ್ತು ಜೈನಾಬಿ ದಂಪತಿ ಮಗಳಾಗಿ ಜನಿಸಿದ್ದ ಸಾರಾ 1984ರಲ್ಲಿ ‘ಚಂದ್ರಗಿರಿಯ ತೀರದಲ್ಲಿ’ ಕಾದಂಬರಿಯ ಬರೆದಿದ್ದರು. ಕನ್ನಡ ಸಾರಸ್ವತ ಲೋಕದಲ್ಲಿ ಈ ಕಾದಂಬರಿ ಸಾಕಷ್ಟು ಸದ್ದು ಮಾಡಿತ್ತು ಹಾಗೆ ಸಾರಾ ಅವರನ್ನು ಪ್ರಖ್ಯಾತಿಯ ಶಿಖರಕ್ಕೆ ಏರಿಸಿತ್ತು.
ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಬಂದಿವೆ. ಕಾದಂಬರಿಯು ದಕ್ಷಿಣ ಭಾರತದ ಹಲವು ಭಾಷೆಗಳು ಮಾತ್ರವಲ್ಲದೆ, ಹಿಂದಿ ಮತ್ತು ಒರಿಯಾ ಭಾಷೆಗೆ ಅನುವಾದಗೊಂಡಿತು.

ಅವರು ಸಹನಾ, ವಜ್ರಗಳು, ಕದನವಿರಾಮ, ಸುಳಿಯಲ್ಲಿ ಸಿಕ್ಕವರು, ತಳಒಡೆದ ದೋಣಿಯಲ್ಲಿ, ಪ್ರವಾಹ-ಸುಳಿ, ಪಂಜರ, ಇಳಿಜಾರು, ಕಾಣಿಕೆ ಮೊದಲಾದ ಕಾದಂಬರಿಗಳನ್ನು ರಚಿಸಿದ್ದಾರೆ. ಐದು ಕಥಾಸಂಕಲನ, ನಾಟಕ, ಪ್ರವಾಸ ಕೃತಿಗಳು, ಪ್ರಬಂಧ ಸಂಕಲನಗಳನ್ನು ಹೊರತಂದಿದ್ದಾರೆ. ಕಮಲಾದಾಸ್ (ಮನೋಮಿ), ಬಿ.ಎಂ. ಸುಹರಾ(ಬಲೆ) ಪಿ.ಕೆ. ಬಾಲಕೃಷ್ಣನ್ (ನಾನಿನ್ನು ನಿದ್ರಿಸುವೆ), ಈಚರ ವಾರಿಯರ್(ತುರ್ತು ಪರಿಸ್ಥಿತಿಯ ಕರಾಳ ಮುಖ) , ಆರ್. ಬಿ. ಶ್ರೀಕುಮಾರ್ (ಧರ್ಮದ ಹೆಸರಿನಲ್ಲಿ), ಡಾ. ಕತೀಜಾ ಮುಮ್ತಾಜ್ (ಮುಂಬೆಳಕು), ಎಂ.ಎನ್. ಕಾರಶೇಂ(ವೈಕಂ ಮಹಮ್ಮದ್ ಬಷೀರ್), ಸಯ್ಯದ್ ಮೆಹಬೂಬ್ ಶಾ ಖಾದ್ರಿ (ಮುಸ್ಲಿಂ ಮಹಿಳೆಯರು ಮತ್ತು ತಲಾಖ್) ಎಂಬ ಕೃತಿಗಳನ್ನು ಮಲಯಾಳ ಭಾಷೆಯಿಂದ ಕನ್ನಡಕ್ಕೆ ಅನುವಾದಿಸಿದ್ದರು.
ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಗೌರವ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಬಂದಿವೆ. ಮಂಗಳೂರು ವಿಶ್ವವಿದ್ಯಾಲಯವು ಅವರಿಗೆ 2008ರಲ್ಲಿ ಗೌರವ ಡಾಕ್ಟರೇಟ್‌ ನೀಡಿತ್ತು.
ಸಾರಾ ಅವರು ನಾಲ್ವರು ಪುತ್ರರನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು