1:31 AM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಚಂದ್ರಯಾನ-3: ಸ್ಪೇಸ್ ಕ್ರಾಫ್ಟ್ ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಂ ಲ್ಯಾಂಡರ್; 23ರಂದು ಸಾಫ್ಟ್ ಲ್ಯಾಂಡಿಂಗ್

17/08/2023, 22:33

ಶ್ರೀಹರಿಕೋಟ(reporterkarnataka.com): ಚಂದ್ರಯಾನ-3 ಯಾತ್ರೆ ಮಹತ್ವದ ಹೆಜ್ಜೆ ಇಟ್ಟಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ. ಸ್ಪೇಸ್ ಕ್ರಾಫ್ಟ್ ನಿಂದ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಆಗಸ್ಟ್ 23ರಂದು ಸ್ವಾಫ್ಟ್ ಲ್ಯಾಂಡಿಂಗ್ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಲ್ಯಾಂಡರ್ ಈಗಾಗಲೇ ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಚಂದ್ರಯಾನ 3 ನೌಕೆ ಜುಲೈ 14ರಂದು ಉಡಾವಣೆಗೊಂಡು ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು