9:12 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಚಂದ್ರಯಾನ-3: ಸ್ಪೇಸ್ ಕ್ರಾಫ್ಟ್ ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಂ ಲ್ಯಾಂಡರ್; 23ರಂದು ಸಾಫ್ಟ್ ಲ್ಯಾಂಡಿಂಗ್

17/08/2023, 22:33

ಶ್ರೀಹರಿಕೋಟ(reporterkarnataka.com): ಚಂದ್ರಯಾನ-3 ಯಾತ್ರೆ ಮಹತ್ವದ ಹೆಜ್ಜೆ ಇಟ್ಟಿದ್ದು, ಲ್ಯಾಂಡರ್ ಪ್ರತ್ಯೇಕ ಪ್ರಕ್ರಿಯೆ ಯಶಸ್ವಿಯಾಗಿದೆ. ಸ್ಪೇಸ್ ಕ್ರಾಫ್ಟ್ ನಿಂದ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿದೆ. ಆಗಸ್ಟ್ 23ರಂದು ಸ್ವಾಫ್ಟ್ ಲ್ಯಾಂಡಿಂಗ್ ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ.

ಲ್ಯಾಂಡರ್ ಈಗಾಗಲೇ ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ್ದು, ಚಂದ್ರನಿಗೆ ಮತ್ತಷ್ಟು ಹತ್ತಿರವಾಗಿದೆ. ನಾಳೆ ಸಂಜೆ ವೇಳೆಗೆ ಡೀ-ಬೂಸ್ಟಿಂಗ್ ನಡೆಯಲಿದ್ದು, ಲ್ಯಾಂಡರ್ ನ್ನು ಹಂತ ಹಂತವಾಗಿ ಚಂದ್ರನ ಮೇಲ್ಮೈ ಗೆ ಇಳಿಸುವ ಪ್ರಕ್ರಿಯೆ ಪ್ರಾರಂಭವಾಗಲಿದೆ.
ಚಂದ್ರಯಾನ 3 ನೌಕೆ ಜುಲೈ 14ರಂದು ಉಡಾವಣೆಗೊಂಡು ಆಗಸ್ಟ್ 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಅದಾದ ಬಳಿಕ ಸತತ ಮೂರು ಕಕ್ಷೆ ಪರಿಚಲನೆ ಮೂಲಕ (ಆಗಸ್ಟ್ 6, 9 ಹಾಗೂ 14) ಚಂದ್ರನ ಮೇಲ್ಮೈಯ ಸನಿಹಕ್ಕೆ ತಲುಪಿದೆ. ಆಗಸ್ಟ್ 23ರಂದು ಸಾಫ್ಟ್ ಲ್ಯಾಂಡಿಂಗ್ ಮೂಲಕ ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸಲು ಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು