10:20 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಚರಣ್ ರಾಜ್ ರೈ ಕೊಲೆ ಪ್ರಕರಣ: 3 ಮಂದಿ ಪೊಲೀಸ್ ವಶಕ್ಕೆ; ಪ್ರಮುಖ ಆರೋಪಿಗಾಗಿ ಶೋಧ

06/06/2022, 22:00

ಪುತ್ತೂರು(reporterkarnataka.com): ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ  ಆರೋಪಿ ಚರಣ್ ರಾಜ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ ತಂಡವೊಂದು‌ ನಡುರಸ್ತೆಯಲ್ಲಿ ಚರಣ್ ರಾಜ್ ರೈ ಹತ್ಯೆ ನಡೆಸಿತ್ತು. ಕೆಲವು ವರ್ಷಗಳ ಹಿಂದೆ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.

ಇದೀಗ ಚರಣ್ ರಾಜ್ ಕೊಲೆಗೆ ಸಂಬಂಧಿಸಿದಂತೆ

ನಾಲ್ವರು ಆರೋಪಿಗಳಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಶದಲ್ಲಿರುವವರನ್ನು

ಕೆಯ್ಯೂರು ನಿವಾಸಿ ನರ್ಮೇಶ್ ರೈ(29), ನಿತಿಲ್ ಶೆಟ್ಟಿ(23), ವಿಜೇಶ್(22) ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಕಿಶೋರ್ ಪೂಜಾರಿ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಚರಣ್ ರಾಜ್ ಎಂಬಾತನನ್ನು ಕಲ್ಲಡ್ಕದ ಕಿಶೋರ್‍ ಪೂಜಾರಿ ತಂಡವು ಹತ್ಯೆ ಮಾಡಿತ್ತು ಎಂಬ ಆರೋಪವಿದೆ.

ಕಾರ್ಯಾ ಚರಣೆಯಲ್ಲಿ ದಕ್ಷಿಣ ಕನ್ನಡ ಎಸ್‌.ಪಿ ಸೋನಾವಣೆ ಋಷಿಕೇಷ್‌ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಪೊಲೀಸ್ ಉಪಾಧೀಕ್ಷಕರಾದ ಗಾನ ಪಿ ಕುಮಾರ್, ಸುಳ್ಯ ಠಾಣೆಯ ವೃತ್ತ ನಿರೀಕ್ಷಕರಾದ ನವೀನ್ ಚಂದ್ರ ಜೋಗಿ, ಬೆಳ್ಳಾರೆ ಪಿಎಸ್ಐ ರುಕ್ಮ ನಾಯ್ಕ್, ಸಂಪ್ಯ ಪೊಲೀಸ್‌ ಸಬ್ ಇನ್ಸ್ ಪೆಕ್ಟರ್ ಉದಯ ರವಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು