12:35 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಚರಣ್ ರಾಜ್ ರೈ ಕೊಲೆ ಪ್ರಕರಣ: 3 ಮಂದಿ ಪೊಲೀಸ್ ವಶಕ್ಕೆ; ಪ್ರಮುಖ ಆರೋಪಿಗಾಗಿ ಶೋಧ

06/06/2022, 22:00

ಪುತ್ತೂರು(reporterkarnataka.com): ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ  ಆರೋಪಿ ಚರಣ್ ರಾಜ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ ತಂಡವೊಂದು‌ ನಡುರಸ್ತೆಯಲ್ಲಿ ಚರಣ್ ರಾಜ್ ರೈ ಹತ್ಯೆ ನಡೆಸಿತ್ತು. ಕೆಲವು ವರ್ಷಗಳ ಹಿಂದೆ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.

ಇದೀಗ ಚರಣ್ ರಾಜ್ ಕೊಲೆಗೆ ಸಂಬಂಧಿಸಿದಂತೆ

ನಾಲ್ವರು ಆರೋಪಿಗಳಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಶದಲ್ಲಿರುವವರನ್ನು

ಕೆಯ್ಯೂರು ನಿವಾಸಿ ನರ್ಮೇಶ್ ರೈ(29), ನಿತಿಲ್ ಶೆಟ್ಟಿ(23), ವಿಜೇಶ್(22) ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಕಿಶೋರ್ ಪೂಜಾರಿ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಚರಣ್ ರಾಜ್ ಎಂಬಾತನನ್ನು ಕಲ್ಲಡ್ಕದ ಕಿಶೋರ್‍ ಪೂಜಾರಿ ತಂಡವು ಹತ್ಯೆ ಮಾಡಿತ್ತು ಎಂಬ ಆರೋಪವಿದೆ.

ಕಾರ್ಯಾ ಚರಣೆಯಲ್ಲಿ ದಕ್ಷಿಣ ಕನ್ನಡ ಎಸ್‌.ಪಿ ಸೋನಾವಣೆ ಋಷಿಕೇಷ್‌ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಪೊಲೀಸ್ ಉಪಾಧೀಕ್ಷಕರಾದ ಗಾನ ಪಿ ಕುಮಾರ್, ಸುಳ್ಯ ಠಾಣೆಯ ವೃತ್ತ ನಿರೀಕ್ಷಕರಾದ ನವೀನ್ ಚಂದ್ರ ಜೋಗಿ, ಬೆಳ್ಳಾರೆ ಪಿಎಸ್ಐ ರುಕ್ಮ ನಾಯ್ಕ್, ಸಂಪ್ಯ ಪೊಲೀಸ್‌ ಸಬ್ ಇನ್ಸ್ ಪೆಕ್ಟರ್ ಉದಯ ರವಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು