8:41 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಚರಣ್ ರಾಜ್ ರೈ ಕೊಲೆ ಪ್ರಕರಣ: 3 ಮಂದಿ ಪೊಲೀಸ್ ವಶಕ್ಕೆ; ಪ್ರಮುಖ ಆರೋಪಿಗಾಗಿ ಶೋಧ

06/06/2022, 22:00

ಪುತ್ತೂರು(reporterkarnataka.com): ಹಿಂದೂ ಜಾಗರಣ ವೇದಿಕೆ ಮುಖಂಡ ಕಾರ್ತಿಕ್ ಮೇರ್ಲ ಹತ್ಯೆ ಪ್ರಕರಣದ  ಆರೋಪಿ ಚರಣ್ ರಾಜ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಭಾನುವಾರ ಮಧ್ಯಾಹ್ನ ತಂಡವೊಂದು‌ ನಡುರಸ್ತೆಯಲ್ಲಿ ಚರಣ್ ರಾಜ್ ರೈ ಹತ್ಯೆ ನಡೆಸಿತ್ತು. ಕೆಲವು ವರ್ಷಗಳ ಹಿಂದೆ ಕಾರ್ತಿಕ್ ಮೇರ್ಲ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚರಣ್ ರಾಜ್ ಆರೋಪಿಯಾಗಿದ್ದ.

ಇದೀಗ ಚರಣ್ ರಾಜ್ ಕೊಲೆಗೆ ಸಂಬಂಧಿಸಿದಂತೆ

ನಾಲ್ವರು ಆರೋಪಿಗಳಲ್ಲಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ವಶದಲ್ಲಿರುವವರನ್ನು

ಕೆಯ್ಯೂರು ನಿವಾಸಿ ನರ್ಮೇಶ್ ರೈ(29), ನಿತಿಲ್ ಶೆಟ್ಟಿ(23), ವಿಜೇಶ್(22) ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಕಿಶೋರ್ ಪೂಜಾರಿ ಎಂಬಾತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕಾರ್ತಿಕ್ ಮೇರ್ಲ ಹತ್ಯೆಗೆ ಪ್ರತೀಕಾರವಾಗಿ ಚರಣ್ ರಾಜ್ ಎಂಬಾತನನ್ನು ಕಲ್ಲಡ್ಕದ ಕಿಶೋರ್‍ ಪೂಜಾರಿ ತಂಡವು ಹತ್ಯೆ ಮಾಡಿತ್ತು ಎಂಬ ಆರೋಪವಿದೆ.

ಕಾರ್ಯಾ ಚರಣೆಯಲ್ಲಿ ದಕ್ಷಿಣ ಕನ್ನಡ ಎಸ್‌.ಪಿ ಸೋನಾವಣೆ ಋಷಿಕೇಷ್‌ ಭಗವಾನ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ, ಪೊಲೀಸ್ ಉಪಾಧೀಕ್ಷಕರಾದ ಗಾನ ಪಿ ಕುಮಾರ್, ಸುಳ್ಯ ಠಾಣೆಯ ವೃತ್ತ ನಿರೀಕ್ಷಕರಾದ ನವೀನ್ ಚಂದ್ರ ಜೋಗಿ, ಬೆಳ್ಳಾರೆ ಪಿಎಸ್ಐ ರುಕ್ಮ ನಾಯ್ಕ್, ಸಂಪ್ಯ ಪೊಲೀಸ್‌ ಸಬ್ ಇನ್ಸ್ ಪೆಕ್ಟರ್ ಉದಯ ರವಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು