1:44 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ರಥೋತ್ಸವ: ತ.ನಾ., ಕೇರಳ, ಆಂಧ್ರದಿಂದಲೂ ಭಕ್ತರ ದಂಡು

06/10/2025, 20:48

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಹಾಗೂ ಭಕ್ತಿಯಿಂದ ರಥೋತ್ಸವ ನೆರವೇರಿತು.
ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮುಗಿದ ನಾಲ್ಕು ದಿನಗಳ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಟುಂಬದವರೊಂದಿಗೆ ಪೂಜೆ ಸಲ್ಲಿಸಿದರು. ಈ ವೇಳೆ ರಥ ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ಪೊಲೀಸ್ ಬ್ಯಾಂಡ್ ಹಾಗೂ ಸಿಡಿಮದ್ದುಗಳನ್ನು ಸಿಡಿಸಲಾಯಿತು.


ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಸೇರಿದಂತೆ ತಮಿಳುನಾಡು, ಕೇರಳ ಆಂಧ್ರಪ್ರದೇಶಗಳಿಂದ ಸಾವಿರಾರು ಭಕ್ತಾದಿಗಳು ರಥೋತ್ಸವಕ್ಕೆ ಸಾಕ್ಷಿಯಾದರು. ಬಳಿಕ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸಕಾಲಕ್ಕೆ ಮಳೆ ಬೆಳೆ ಬಂದು ರೈತಾಪಿ ವರ್ಗದ ಜನರು ಉತ್ತಮ ಬೆಳೆ ಬೆಳೆಯಲಿ ಹಾಗೂ ರಾಜ್ಯದ ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಗಿದೆ ಎಂದರು.
ರಾಜಮಾತೆ ಪ್ರಮೋದಾ ದೇವಿ ಒಡೆಯರ್, ಪ್ರತಿ ವರ್ಷದಂತೆ ಈ ವರ್ಷವೂ ಸಹ ತಾಯಿ ಚಾಮುಂಡೇಶ್ವರಿಗೆ ರಥೋತ್ಸವದ ಮುಖಾಂತರ ಪೂಜೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು