6:09 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಚಾರ್ಮಾಡಿ ಫಾಲ್ಸ್ ನ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗರ ಹುಚ್ಚಾಟ: ಬಟ್ಟೆ ಹೊತ್ತೊಯ್ದ ಪೊಲೀಸರು; ಚಡ್ಡಿಯಲ್ಲಿ ಓಡಿದ ಯುವಕರು

11/07/2024, 11:27

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿಗರಿಗೆ ನಿಷೇಧಿತ ಅಪಾಯಕಾರಿ ಚಾರ್ಮಾಡಿ ಫಾಲ್ಸ್ ನಲ್ಲಿ ಮೋಜಿಗಾಗಿ ಹುಚ್ಚಾಟ ನಡೆಸುತ್ತಿದ್ದ ಯುವಕ ಬಟ್ಟೆಯನ್ನು ಪೊಲೀಸರು ಹೊತ್ತೊಯ್ದ ಘಟನೆ ನಡೆದಿದೆ.


ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಪ್ರವಾಸಿಗ ಯುವಕರು
ಬಂಡೆ ಹತ್ತಿ ಹುಚ್ಚಾಟ ನಡೆಸುತ್ತಿದ್ದರು. ಅಷ್ಟೇ ಅಲ್ಲದೆ
ಜಲಪಾತದ ಬಳಿ ಸ್ನಾನ ಮಾಡುತ್ತಿದ್ದರು.ಇದನ್ನು ಕಂಡ ಪೊಲೀಸರು ಪ್ರವಾಸಿಗರ ಜೀವ ರಕ್ಷಣೆಯ ದೃಷ್ಟಿ ಯಿಂದ ಅವರ ಬಟ್ಟೆ ಹೊತ್ತೊಯ್ದು ಬಿಸಿ ಮುಟ್ಟಿಸಿದರು. ಪ್ರವಾಸಿಗರ ಬಟ್ಟೆಯನ್ನು ತಂದು ಪೊಲೀಸರು ತಮ್ಮ ಗಸ್ತು ವಾಹನಕ್ಕೆ ತುಂಬಿಸಿದರು.
ಆರಂಭದಲ್ಲಿ ಸರ್…ಸರ್…ಎನ್ನುತ್ತಾ ಬಟ್ಟೆ ನೀಡುವಂತೆ ಅಂಗಲಾಚುತ್ತಿದ್ದ ಯುವಕರು ಕ್ಲೈಮ್ಯಾಕ್ಸ್ ನಲ್ಲಿ ಪೊಲೀಸರ ಜೊತೆಯೇ ಜಗಳಕ್ಕೆ ಶುರು ಮಾಡಿದರು. ಪೊಲೀಸರಿಗೆ ಆವಾಜ್ ಹಾಕಿ ಮತ್ತೆ ಪೇಚಿಗೆ ಸಿಲುಕಿದರು.
ಸ್ವಲ್ಪ ಹೊತ್ತಿನ ನಂತರ ಎಚ್ಚರಿಕೆ ಜೊತೆಗೆ ಬಟ್ಟೆಯನ್ನು ಕೊಟ್ಟು
ಪೊಲೀಸರು ಕಳುಹಿಸಿದರು.
ಬಣಕಲ್ ಗಸ್ತು ಪೊಲೀಸರಿಂದ ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು