1:26 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ

07/11/2021, 12:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಸಾವನ್ನಪ್ಪಿದ ದುರ್ದೈವಿಯನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರಿನ ಜೀವನ್ (21) ಎಂದು ಗುರುತಿಸಲಾಗಿದೆ.

ಶನಿವಾರ 11 ಜನ ಯುವಕರನ ತಂಡ 6 ಬೈಕಿನಲ್ಲಿ ಧರ್ಮಸ್ಥಳ ಕಡೆಗೆ ಹೊರಟಿದ್ದು, ಭಾನುವಾರ ಬೆಳಿಗ್ಗಿನ ಜಾವ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ರಸ್ತೆ ಬದಿಯಲ್ಲಿದ್ದ ಮರವೊಂದು ಬಿದ್ದು ಜೀವನ್ ಮೃತಪಟ್ಟಿದ್ದಾರೆ‌. ರವಿ ಎಂಬುವವರು ಬೈಕ್ ಚಲಾಯಿಸುತ್ತಿದ್ದು ಜೀವನ್ ಹಿಂಬದಿಯಲ್ಲಿ ಕುಳಿತ್ತಿದ್ದರು. ರವಿ ಅವರು ಹೆಲ್ಮೆಟ್ ಧರಿಸಿದ್ದು ಹಿಂಬದಿಯಲ್ಲಿ ಕುಳಿತಿದ್ದ ಜೀವನ್ ಅವರ ಮೇಲೆ ಏಕಾಏಕಿ ಮರ ಬಿದ್ದ ಪರಿಣಾಮ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಮಂಗಳೂರು ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗುತ್ತಿದ್ದ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಣಕಲ್ ಪೋಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು