6:58 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಫಿ, ಟಿಕ್ ಟಾಕ್ ಆಟ: ವಾಹನ ಸವಾರರಿಗೆ ಪ್ರಾಣ ಸಂಕಟ!!

26/06/2022, 21:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ಮೂಲಕ ವಿಲ್ಲುಪುರಂ ಮಂಗಳೂರು ರಾಷ್ಟ್ರೀಯ ಹೆದ್ದಾರಿ‌ ಹಾದು ಹೋಗಿದ್ದು, ಪ್ರವಾಸಿಗರು ರಸ್ತೆ ಮಧ್ಯೆ ನಿಂತು ಸೆಲ್ಪಿ ಪೋಟೊ ತೆಗೆಯುತ್ತಿರುವುದು ಮಾಮೂಲಾಗಿದ್ದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.


ರಸ್ತೆ ಮಧ್ಯೆಯೇ ಟಿಕ್ ಟಾಕ್ ವೀಡಿಯೋ, ಸೆಲ್ಪಿ ತೆಗೆಯುವ ಪ್ರವಾಸಿಗರಿಂದಾಗಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿ ವಾಹನಗಳು ಸಾಲುಗಟ್ಟಿ ಕೊಂಡು ಸಾಗುವಂತಾಗಿದೆ. ಕೆಲ ಪ್ರವಾಸಿಗರು ರಸ್ತೆಯ ಮೇಲೆಯೇ ವಾಹನ ನಿಲ್ಲಿಸಿ ಜೋರಾಗಿ ಹಾಡು ಹಾಕಿಕೊಂಡು ನೃತ್ಯ ಮಾಡುತ್ತಿದ್ದು ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಚಾರ್ಮಾಡಿ ಘಾಟ್ ಮಾರ್ಗವಾಗಿ ಪೊಲೀಸ್ ಗಸ್ತು ವಾಹನ ಸಂಚರಿಸುತ್ತಿದ್ದರೂ‌ ಕೂಡ ಪ್ರವಾಸಿಗರ ಸೆಲ್ಪಿ ಪೋಟೊ ಕ್ರೇಜ್ ಗೆ ಕಡಿವಾಣ ಇಲ್ಲದಂತಾಗಿದೆ. ಪೋಟೊ ತೆಗೆಯುವುದನ್ನು ನಿಷೇಧಿಸಿ ಸೂಚನಾ ಫಲಕ ಅಳವಡಿಸಿದ್ದರೂ ಕೂಡ ರಸ್ತೆಯಲ್ಲಿ ನಿಂತು ಪೋಟೊ ತೆಗೆಯುವುದು ಮುಂದುವರಿದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು