5:55 AM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಫಿ, ಟಿಕ್ ಟಾಕ್ ಆಟ: ವಾಹನ ಸವಾರರಿಗೆ ಪ್ರಾಣ ಸಂಕಟ!!

26/06/2022, 21:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ಮೂಲಕ ವಿಲ್ಲುಪುರಂ ಮಂಗಳೂರು ರಾಷ್ಟ್ರೀಯ ಹೆದ್ದಾರಿ‌ ಹಾದು ಹೋಗಿದ್ದು, ಪ್ರವಾಸಿಗರು ರಸ್ತೆ ಮಧ್ಯೆ ನಿಂತು ಸೆಲ್ಪಿ ಪೋಟೊ ತೆಗೆಯುತ್ತಿರುವುದು ಮಾಮೂಲಾಗಿದ್ದು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ.


ರಸ್ತೆ ಮಧ್ಯೆಯೇ ಟಿಕ್ ಟಾಕ್ ವೀಡಿಯೋ, ಸೆಲ್ಪಿ ತೆಗೆಯುವ ಪ್ರವಾಸಿಗರಿಂದಾಗಿ ಸುಗಮ ವಾಹನ ಸಂಚಾರಕ್ಕೆ ತೊಂದರೆಯಾಗಿ ವಾಹನಗಳು ಸಾಲುಗಟ್ಟಿ ಕೊಂಡು ಸಾಗುವಂತಾಗಿದೆ. ಕೆಲ ಪ್ರವಾಸಿಗರು ರಸ್ತೆಯ ಮೇಲೆಯೇ ವಾಹನ ನಿಲ್ಲಿಸಿ ಜೋರಾಗಿ ಹಾಡು ಹಾಕಿಕೊಂಡು ನೃತ್ಯ ಮಾಡುತ್ತಿದ್ದು ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಚಾರ್ಮಾಡಿ ಘಾಟ್ ಮಾರ್ಗವಾಗಿ ಪೊಲೀಸ್ ಗಸ್ತು ವಾಹನ ಸಂಚರಿಸುತ್ತಿದ್ದರೂ‌ ಕೂಡ ಪ್ರವಾಸಿಗರ ಸೆಲ್ಪಿ ಪೋಟೊ ಕ್ರೇಜ್ ಗೆ ಕಡಿವಾಣ ಇಲ್ಲದಂತಾಗಿದೆ. ಪೋಟೊ ತೆಗೆಯುವುದನ್ನು ನಿಷೇಧಿಸಿ ಸೂಚನಾ ಫಲಕ ಅಳವಡಿಸಿದ್ದರೂ ಕೂಡ ರಸ್ತೆಯಲ್ಲಿ ನಿಂತು ಪೋಟೊ ತೆಗೆಯುವುದು ಮುಂದುವರಿದಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕ್ರಮ ಕೈಗೊಳ್ಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು