10:06 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ

07/11/2021, 12:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಮೃತಪಟ್ಟ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಸಾವನ್ನಪ್ಪಿದ ದುರ್ದೈವಿಯನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕಮಾಲೂರಿನ ಜೀವನ್ (21) ಎಂದು ಗುರುತಿಸಲಾಗಿದೆ.

ಶನಿವಾರ 11 ಜನ ಯುವಕರನ ತಂಡ 6 ಬೈಕಿನಲ್ಲಿ ಧರ್ಮಸ್ಥಳ ಕಡೆಗೆ ಹೊರಟಿದ್ದು, ಭಾನುವಾರ ಬೆಳಿಗ್ಗಿನ ಜಾವ ಚಾರ್ಮಾಡಿ ಘಾಟ್ ನ ಸೋಮನಕಾಡು ಸಮೀಪ ರಸ್ತೆ ಬದಿಯಲ್ಲಿದ್ದ ಮರವೊಂದು ಬಿದ್ದು ಜೀವನ್ ಮೃತಪಟ್ಟಿದ್ದಾರೆ‌. ರವಿ ಎಂಬುವವರು ಬೈಕ್ ಚಲಾಯಿಸುತ್ತಿದ್ದು ಜೀವನ್ ಹಿಂಬದಿಯಲ್ಲಿ ಕುಳಿತ್ತಿದ್ದರು. ರವಿ ಅವರು ಹೆಲ್ಮೆಟ್ ಧರಿಸಿದ್ದು ಹಿಂಬದಿಯಲ್ಲಿ ಕುಳಿತಿದ್ದ ಜೀವನ್ ಅವರ ಮೇಲೆ ಏಕಾಏಕಿ ಮರ ಬಿದ್ದ ಪರಿಣಾಮ ತಲೆಗೆ ಗಂಭೀರವಾಗಿ ಗಾಯವಾಗಿದ್ದು ಕೂಡಲೇ ಮಂಗಳೂರು ಕಡೆಯಿಂದ ಚಿಕ್ಕಮಗಳೂರು ಕಡೆಗೆ ಸಾಗುತ್ತಿದ್ದ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮದ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬಣಕಲ್ ಪೋಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು