5:09 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ!

16/08/2023, 14:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಪ್ರವಾಸಿಗರು ಚಾರ್ಮಾಡಿ ಘಾಟ್‌ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ.
ರಸ್ತೆ ಬದಿ ಬಿಯರ್ ಕುಡ್ಕಂಡು ಪ್ರವಾಸಿಗರ ಮೋಜು ಮಸ್ತಿ ಮಾಡಲಾರಂಭಿಸಿದ್ದಾರೆ.


ಕಾರಿನಲ್ಲಿ ಸಾಂಗ್ ಹಾಕಿಕೊಂಡು ಯುವಕರು ಕುಣಿದು ಕುಪ್ಪಳಿಸಿಸುತ್ತಾರೆ. ಐತಿಹಾಸಿಕ ಕಾಲಭೈರವೇಶ್ವರ ಸ್ವಾಮಿ ದೇಗುಲದ ಬಳಿಯೇ ಮದ್ಯ ಸೇವಿಸಿ ನೃತ್ಯ ನಡೆದಿದೆ. ಇದು
ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುವ ಸುಪ್ರಸಿದ್ಧ ತಾಣವಾಗಿದೆ.
ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಹಚ್ಚ ಹಸಿರ ಮುತ್ತೈದೆ ಸೊಬಗು ಇಲ್ಲಿ ಪ್ರವಾಸಿಗರನ್ನು ಸೆಳೆಯುತ್ತದೆ.
ಮಕ್ಕಳ ಸಮೇತ ಫ್ಯಾಮಿಲಿಗಳು ಭೇಟಿ ನೀಡುವ ಸುಂದರ ಸೊಬಗಿನ ತಾಣವಾಗಿದೆ.
ಪ್ರವಾಸಿಗರ ವರ್ತನೆಯಿಂದ ಇತರೇ ಪ್ರವಾಸಿಗರಿಗೂ ಕಿರಿ-ಕಿರಿಯಾಗುತ್ತಿದೆ.
ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳಿಯರು, ಪ್ರವಾಸಿಗರ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು