1:13 AM Tuesday23 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ಆಯ್ತು, ಇದೀಗ ದೇವರಮನೆ ಗುಡ್ಡ ರಸ್ತೆ ಬದಿಯಲ್ಲೇ ಯುವಕರ ಡ್ಯಾನ್ಸ್: ಮೋಜು- ಮಸ್ತಿ!

16/08/2023, 14:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಪ್ರವಾಸಿಗರು ಚಾರ್ಮಾಡಿ ಘಾಟ್‌ ನಲ್ಲಿ ರಸ್ತೆ ಬದಿ ಮೋಜು- ಮಸ್ತಿ ಮಾಡುವುದು ಇದೀಗ ಹಳೆಯ ವಿಷಯವಾದರೆ, ಇದೀಗ ಮೂಡಿಗೆರೆ ತಾಲೂಕಿನ ದೇವರಮನೆಗುಡ್ಡ ಸಮೀಪ ರಸ್ತೆ ಬದಿಯಲ್ಲಿ ಯುವಕರ ಗುಂಪಿನ ಡ್ಯಾನ್ಸ್ ಶುರುವಾಗಿದೆ.
ರಸ್ತೆ ಬದಿ ಬಿಯರ್ ಕುಡ್ಕಂಡು ಪ್ರವಾಸಿಗರ ಮೋಜು ಮಸ್ತಿ ಮಾಡಲಾರಂಭಿಸಿದ್ದಾರೆ.


ಕಾರಿನಲ್ಲಿ ಸಾಂಗ್ ಹಾಕಿಕೊಂಡು ಯುವಕರು ಕುಣಿದು ಕುಪ್ಪಳಿಸಿಸುತ್ತಾರೆ. ಐತಿಹಾಸಿಕ ಕಾಲಭೈರವೇಶ್ವರ ಸ್ವಾಮಿ ದೇಗುಲದ ಬಳಿಯೇ ಮದ್ಯ ಸೇವಿಸಿ ನೃತ್ಯ ನಡೆದಿದೆ. ಇದು
ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುವ ಸುಪ್ರಸಿದ್ಧ ತಾಣವಾಗಿದೆ.
ಕಣ್ಣಿನ ದೃಷ್ಟಿ ಮುಗಿದರೂ ಮುಗಿಯದ ಹಚ್ಚ ಹಸಿರ ಮುತ್ತೈದೆ ಸೊಬಗು ಇಲ್ಲಿ ಪ್ರವಾಸಿಗರನ್ನು ಸೆಳೆಯುತ್ತದೆ.
ಮಕ್ಕಳ ಸಮೇತ ಫ್ಯಾಮಿಲಿಗಳು ಭೇಟಿ ನೀಡುವ ಸುಂದರ ಸೊಬಗಿನ ತಾಣವಾಗಿದೆ.
ಪ್ರವಾಸಿಗರ ವರ್ತನೆಯಿಂದ ಇತರೇ ಪ್ರವಾಸಿಗರಿಗೂ ಕಿರಿ-ಕಿರಿಯಾಗುತ್ತಿದೆ.
ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳಿಯರು, ಪ್ರವಾಸಿಗರ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು