8:45 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆ ಪ್ರತ್ಯಕ್ಷ: ಟ್ರಾಫಿಕ್ ಜಾಮ್; ಸಾಲುಗಟ್ಟಿ ನಿಂತ ವಾಹನಗಳು; ಕೆಎಸ್ಸಾರ್ಟಿಸಿ ಬಸ್ ಸ್ವಲ್ಪದರಲ್ಲೇ ಪಾರು

17/05/2023, 18:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.
ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಅಣಿ ಅಂತರದಲ್ಲಿ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದರಿಂದ ರಸ್ತೆಯಲ್ಲಿ ನಿಂತು ಮರದತ್ತಿರ ವಿಶ್ರಾಂತಿ ಪಡೆಯುತ್ತಿದ್ದ ಕಾಡಾನೆ ಸ್ವಲ್ಪ ಸಮಯದ ನಂತರ ಏಳನೇ ತಿರುವಿನ ಮತ್ತೊಂದು ಭಾಗದಲ್ಲಿ ಹೋಗಿ ನಿಂತಿತು.


ಬಸ್ ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದು ಒಂದೊಂದೇ ವಾಹನಗಳು ನಿಧಾನವಾಗಿ ಪಾಸ್ ಆದವು. ಕಾಡಾನೆ ನಿಂತು ನೋಡುವ ದೃಶ್ಯ ಆದರೆ ಕೆಲವು ದ್ವಿಚಕ್ರ ವಾಹನ ಸವಾರರು ಇದ್ದುದರಿಂದ ಅಪಾಯದ ಸೂಚನೆ ಎದ್ದು ಕಾಣುತ್ತಿತ್ತು.ಬಸ್ ಕಾಡಾನೆಯಿಂದ ತುಸು ದಾಟಿದ ನಂತರ ಪ್ರಯಾಣಿಕರೆಲ್ಲರೂ ನಿಟ್ಟುಸಿರು ಬಿಟ್ಟರು.ಅರಣ್ಯ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು