11:13 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆ ಪ್ರತ್ಯಕ್ಷ: ಟ್ರಾಫಿಕ್ ಜಾಮ್; ಸಾಲುಗಟ್ಟಿ ನಿಂತ ವಾಹನಗಳು; ಕೆಎಸ್ಸಾರ್ಟಿಸಿ ಬಸ್ ಸ್ವಲ್ಪದರಲ್ಲೇ ಪಾರು

17/05/2023, 18:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.
ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಅಣಿ ಅಂತರದಲ್ಲಿ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದರಿಂದ ರಸ್ತೆಯಲ್ಲಿ ನಿಂತು ಮರದತ್ತಿರ ವಿಶ್ರಾಂತಿ ಪಡೆಯುತ್ತಿದ್ದ ಕಾಡಾನೆ ಸ್ವಲ್ಪ ಸಮಯದ ನಂತರ ಏಳನೇ ತಿರುವಿನ ಮತ್ತೊಂದು ಭಾಗದಲ್ಲಿ ಹೋಗಿ ನಿಂತಿತು.


ಬಸ್ ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದು ಒಂದೊಂದೇ ವಾಹನಗಳು ನಿಧಾನವಾಗಿ ಪಾಸ್ ಆದವು. ಕಾಡಾನೆ ನಿಂತು ನೋಡುವ ದೃಶ್ಯ ಆದರೆ ಕೆಲವು ದ್ವಿಚಕ್ರ ವಾಹನ ಸವಾರರು ಇದ್ದುದರಿಂದ ಅಪಾಯದ ಸೂಚನೆ ಎದ್ದು ಕಾಣುತ್ತಿತ್ತು.ಬಸ್ ಕಾಡಾನೆಯಿಂದ ತುಸು ದಾಟಿದ ನಂತರ ಪ್ರಯಾಣಿಕರೆಲ್ಲರೂ ನಿಟ್ಟುಸಿರು ಬಿಟ್ಟರು.ಅರಣ್ಯ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು