4:56 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯ ಮಿನಿ ಜಲಪಾತಗಳಿಗೆ ಪೊಲೀಸ್ ನಿಯೋಜನೆ: ಪ್ರವಾಸಿಗರ ಮೋಜು- ಮಸ್ತಿ ನಿಯಂತ್ರಣಕ್ಕೆ ಕ್ರಮ

02/08/2023, 10:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆಯ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಮಿನಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು
ಕುಣಿಯುವುದು ಮತ್ತು ಬಂಡೆಯೇರಿ ಫೋಟೋ ಕ್ಲಿಕ್ಕಿಸಿಕೊಳ್ಳುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.


ಪ್ರವಾಸಿಗರು ರಸ್ತೆಯಲ್ಲೇ ಮೋಜು ಮಸ್ತಿ ಮಾಡಿ
ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದರು. ರಸ್ತೆ ಮಧ್ಯೆ ಕುಣಿಯೋ ಧಾವಂತದಲ್ಲಿ ವಾಹನಗಳಿಗೂ ಅಡ್ಡ ಹೋಗುತ್ತಿದ್ದರು. ರೋಗಿ ಹೊತ್ತ ಆಂಬುಲೆನ್ಸ್ ಕೂಡ ಮುಂದೆ ಸಾಗಲು ಪರದಾಟ ನಡೆಸಬೇಕಿತ್ತು.
ಬಂಡೆ ಮೇಲಿಂದ ಬಿದ್ದು ಕೈ-ಕಾಲು ಮುರಿದುಕೊಂಡವರು ಇದ್ದಾರೆ. ಜಾರೋ ಬಂಡೆ ಕೆಲವರ ಜೀವಕ್ಕೂ ಸಂಚಾಕಾರ ತಂದಿದೆ. ಹಾಗಾಗಿ
ಇದೀಗ ಜಲಪಾತಗಳ ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ ಮಾಡಲಾಗಿದೆ.
ಇಡೀ ದಿನ ಸ್ಥಳದಲ್ಲೇ ಪೊಲೀಸರು
ಮೊಕ್ಕಾಂ ಹೂಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು