10:39 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಲಾರಿ: ತಾಸುಗಟ್ಟಲೆ ವಾಹನ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

20/07/2022, 10:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ನಡುವಿನ ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು‌ ಕೆಟ್ಟು ನಿಂತ ಪರಿಣಾಮ ತಾಸುಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು.

ಘಾಟಿಯ 10ನೇ ತಿರುವಿನಲ್ಲಿ ಮಂಗಳವಾರ ರಾತ್ರಿ ಸುಮಾರು 8.30ರ ಸುಮಾರಿಗೆ  ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು ನಿಂತಿತ್ತು. ಇದರ ಪರಿಣಾಮ ಇತರ ವಾಹನಗಳ ಸುಗಮ ಸಂಚಾರಕ್ಕೆ ತಡೆಯುಂಟಾಯಿತು. ಬೆಂಗಳೂರು ಸೇರಿಂತೆ ಇನ್ನಿತರ ಕಡೆಗಳಿಗೆ ಹೋಗುವ ಬಸ್ಸು ಹಾಗೂ ಇತರ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಈ ಬಗ್ಗೆ ಮಾಹಿತಿ ಪಡೆದ ಹೊಯ್ಸಳದ ಪೊಲೀಸರು ಕೊಟ್ಟಿಗೆಹಾರದ ಚಾರ್ಮಾಡಿ ಗೇಟ್ ಬಳಿ‌ ನಿಯಂತ್ರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಂತರ  ಕ್ರೇನ್ ತರಿಸಿ ಟ್ಯಾಂಕರ್ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 


ಈಗಾಗಲೇ ಶಿರಾಡಿ, ಸಂಪಾಜೆಯಲ್ಲಿ ಮಾರ್ಗ ಕುಸಿತದಿಂದ ವಾಹನ ಸಂಚಾರಕ್ಕೆ ತಡೆಯಾಗಿರುವುದರಿಂದ ಹೆಚ್ಚಿನ ವಾಹನ ಸಂಚಾರ ಈ ರಸ್ತೆಯಲ್ಲಿ‌ ಇದೆ. ವಾಹನ ದಟ್ಟನೆ‌ ಹಾಗೂ ಅತೀ ಹೆಚ್ಚು ಬಸ್ಸುಗಳು ಸಂಚಾರಿಸುವುದರಿಂದ‌ ನಿಯಂತ್ರಿಸಲು‌ ಪೊಲೀಸರು ಹರ ಸಾಹಸ ಪಡುವಂತಾಯಿತು. ಸ್ಥಳದಲ್ಲಿ ಹೊಯ್ಸಳದ ಪಿಎಸ್ ವೆಂಕಪ್ಪ ಮತ್ತು ಬಸವರಾಜ್, ಸಂಚಾರಿ ಠಾಣೆಯ ಪಿಎಸ್ ಐ ಓಡಿಯಪ್ಪ, ಹಾಗೂ ಶಿವರಾಮ ರೈ,,ಕುಮಾರ್  ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು