4:58 AM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಂಜು: 2 ಪ್ರತ್ಯೇಕ ಅಪಘಾತ; ಹಲವರಿಗೆ ಗಾಯ

09/09/2023, 10:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮಳೆ ಜೊತೆ ದಟ್ಟ ಮಂಜು ಕವಿದಿದ್ದು ವಾಹನ ಸವಾರರು ಪಾರ್ಕಿಂಗ್ ಲೈಟ್, ಹೆಡ್‍ಲೈಟ್, ಫಾಗ್ ಲೈಟ್ ಹಾಕಿಕೊಂದು ಹೋದರು ವಾಹನ ಸಂಚಾರ ದುಸ್ತರವಾಗುವಂತಹಾ ಸ್ಥಿತಿ ನಿರ್ಮಾಣವಾಗಿದೆ. 22 ಕಿ.ಮೀ. ವ್ಯಾಪ್ತಿಯ ಕೊಟ್ಟಿಗೆಹಾರ-ಚಾರ್ಮಾಡಿ ಮಾರ್ಗದಲ್ಲಿ ಭಾರೀ ಮಂಜು ಕವಿದಿದ್ದು ಆ ಮಂಜಿನಲ್ಲಿ ವಾಹನ ಸಂಚಾರಿಸಲಾಗದೆ ಸಂಜೆ ಎರಡು ಅಪಘಾತಗಳು ಕೂಡ ಸಂಭವಿಸಿವೆ.


ಬಿದಿರುತಳ ಗ್ರಾಮದ ಬಸ್ ನಿಲ್ದಾಣದ ಬಳಿ ಮಂಗಳೂರಿಗೆ ಹೋಗುತ್ತಿದ್ದ ಬೊಲೆರೋ ವಾಹನವೊಂದು ದಟ್ಟ ಮಂಜಿನಲ್ಲಿ ಸರಿಯಾಗಿ ದಾರಿ ಕಾಣದೆ ರಸ್ತೆಯ ಒಂದು ಬದಿಯ ಪ್ರಪಾತಕ್ಕೆ ಅಡ್ಡಲಾಗಿ ಕಟ್ಟಿದ್ದ ತಡೆಗೋಡೆಗೆ ಡಿಕ್ಕಿಯೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮತ್ತೊಂದು ಅಪಘಾತ ಅಣ್ಣಪ್ಪಸ್ವಾಮಿ ದೇಗುಲದ ಸಮೀಪದ ಕಿರಿದಾದ ರಸ್ತೆಯಲ್ಲಿ ದಟ್ಟ ಮಂಜು ಕವಿದಿದ್ದ ಕಾರಣ ದಾರಿ ಕಾಣದೆ ಹುಬ್ಬಳ್ಳಿಯಿಂದ ಧರ್ಮಸ್ಥಳಕ್ಕೆ ಸಾಗುತ್ತಿದ್ದ ಸರ್ಕಾರಿ ಬಸ್ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮುಗಿಸಿ ಧಾರವಾಡಕ್ಕೆ ಹೊರಟಿದ್ದ ಬೊಲೆರೋ ಕಾರು ಅತಿಯಾದ ತಿರುವಿನ ಕಿರಿ ರಸ್ತೆಯಲ್ಲಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯೊಡೆದಿದ್ದು ತಡೆಗೋಡೆಯೇ ಕುಸಿದು ಬಿದ್ದಿದೆ. ಕಾರು ಹಾಗೂ ಬಸ್ಸಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಈ ಸಣ್ಣ ಕಿರು ರಸ್ತೆಯಲ್ಲಿ ಸಾವಿರಾರು ಅಡಿ ಪ್ರಪಾತವಿದ್ದು, ಸ್ವಲ್ಪ ಹೆಚ್ಚು-ಕಡಿಮೆಯಾಗಿದ್ದರೂ ಬಸ್ ಹಾಗೂ ಕಾರು ಎರಡು ಪ್ರಪಾತಕ್ಕೆ ಬೀಳುತ್ತಿತ್ತು. ಆದರೆ, ಬಹುದೊಡ್ಡ ಅನಾಹುತವೊಂದು ಜಸ್ಟ್ ಮಿಸ್ ಆದಂತಾಗಿದೆ. ಚಾರ್ಮಾಡಿ ಘಾಟಿಯ ಈ ರಸ್ತೆಯಲ್ಲಿ ಈ ಕಿರು ರಸ್ತೆ ಅಂದಿನಿಂದಲೂ ಇದೆ. ಹೆದ್ದಾರಿ ಪ್ರಾಧಿಕಾರ ಈ ಚಿಕ್ಕ ರಸ್ತೆಯನ್ನ ಅಗಲ ಮಾಡಬೇಕೆಂದು ಸ್ಥಳಿಯರು ಮನವಿ ಮಾಡಿದ್ದರು. ಆದರೆ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಡೆಕೇಡಿಸಿಕೊಳ್ಳದ ಕಾರಣ ಇಂದು ಈ ಅನಾಹುತ ಸಂಭವಿಸಿದೆ ಎಂದು ಸ್ಥಳಿಯರು ಪ್ರಾಧಿಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇನ್ನೂ ಈಗ ಘಾಟಿಯಲ್ಲಿ ಭಾರೀ ಮಂಜು ಕವಿದಿದೆ. ತಡೆಗೋಡೆ ಬೇರೆ ಕುಸಿದಿದೆ. ರಸ್ತೆಯೂ ಕಿರಿದಾದ ರಸ್ತೆ. ಮತ್ತೊಂದು ಅನಾಹುತ ಸಂಭವಿಸೋ ಮೊದಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೂ ರಸ್ತೆಗೊಂದು ಬಂದೋಬಸ್ತ್ ಕಲ್ಪಿಸಿ ಶೀಘ್ರದಲ್ಲೇ ತಡೆಗೋಡೆ ನಿರ್ಮಿಸಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು