ಇತ್ತೀಚಿನ ಸುದ್ದಿ
ಚಾರ್ಮಾಡಿ ಘಾಟಿಯಲ್ಲಿ ದಟ್ಟ ಮಂಜು: ಪ್ರಪಾತಕ್ಕೆ ಉರುಳಿದ ಲಾರಿ; ಡ್ರೈವರ್- ಕ್ಲಿನರ್ ಪಾರು
16/09/2023, 10:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಮಂಗಳೂರು- ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಮಂಜು ಮುಸುಕಿದ ಪರಿಣಾಮ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ನಡೆದಿದೆ.
ಕೊಟ್ಟಿಗೆಹಾರ ಚಾರ್ಮಾಡಿ ಘಾಟ್ ಸುತ್ತಮುತ್ತ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಚಾರ್ಮಾಡಿ ಘಾಟ್ ನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿ ನೀರಿನ ಬಾಟಲ್ ತುಂಬಿದ ಲಾರಿ ಒಂದು ಮಂಜಿನಿಂದ ದಾರಿ ಕಾಣದೆ 100 ಅಡಿ ಪ್ರಪಾತಕ್ಕೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಪ್ರಾಣ ಉಳಿಸಿದ ಮರ: ಲಾರಿ ಬಿದ್ದ ಜಾಗದಲ್ಲಿ ಬೃಹತಾಕಾರದ ಮರವಿದ್ದು ಆ ಮರಕ್ಕೆ ಲಾರಿ ತಗಲಿ ನಿಂತಿದೆ. ಆ ಮರ ಇಲ್ಲದಿದ್ದರೆ ಸಾವಿರ ಅಡಿ ಪ್ರಪಾತಕ್ಕೆ ಲಾರಿ ಹೋಗಿ ಬೀಳುತ್ತಿತ್ತು.ಈ ಘಟನೆ ಚಾರ್ಮಾಡಿ ಘಾಟಿಯ ಸೋಮನ ಕಾಡು ಸಮೀಪ ನಡೆದಿದೆ.