8:08 PM Wednesday17 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಗರ ಮೋಜು- ಮಸ್ತಿ: ರಸ್ತೆಯಲ್ಲೇ ಯುವಕ-ಯುವತಿಯ ಡ್ಯಾನ್ಸ್; ಟ್ರಾಫಿಕ್ ಜಾಮ್

10/07/2023, 11:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು-ಮಸ್ತಿ ಜಾಸ್ತಿಯಾಗಿದ್ದು, ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ.
ಘಾಟಿಯುದ್ಧಕ್ಕೂ ಸಣ್ಣ ಸಣ್ಣ ಜಲಪಾತ ತಲೆದೋರುವುದು ಮಳೆಗಾಲದ ಸಮಯದಲ್ಲಿ ಸಾಮಾನ್ಯವಾಗಿದೆ. ವಾಟರ್ ಫಾಲ್ಸ್ ನ ಸೊಬಗಿಗೆ, ಪ್ರಕೃತಿಯ ಧಾರಾಳತನಕ್ಕೆ ಮನಸೋತು ಇಲ್ಲಿ ಪ್ರವಾಸಿಗರು ತಮ್ಮ ವಾಹನಗಳಿಂದ ಇಳಿದು ರಸ್ತೆಯಲ್ಲಿ ಡ್ಯಾನ್ಸ್ ಮಾಡುತ್ತಾರೆ. ಇನ್ನು ತುಂತುರು ಮಳೆ ಬೀಳುತ್ತಿದ್ದರೆ ಪ್ರವಾಸಿಗರು ಮೋಜು- ಮಸ್ತಿ ಹೇಳತೀರದು. ರಸ್ತೆಯಲ್ಲೇ ಯುವಕ- ಯುವತಿಯರು ರೈನ್ ಡ್ಯಾನ್ಸ್ ಮಾಡುತ್ತಾರೆ. ಇದರಿಂದ ಪ್ರಯಾಣಿಕರ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಸಾರ್ವಜನಿಕರು ಆರೋಪಿಸುತ್ತಾರೆ.
ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರನ್ನು ಹೇಳೋರಿಲ್ಲ-ಕೇಳೋರಿಲ್ಲ ಎಂಬ ಸ್ಥಿತಿ ಇದೆ ಎನ್ನುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಕಿರಿದಾದ ಹಾವು ಬಳುಕಿನ ಮೈಕಟ್ಟಿನಲ್ಲಿ ರಸ್ತೆ ಇದೆ.
ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಕಾಣಿಸುವುದಿಲ್ಲ. ಕುಣಿಯುವ ಭರದಲ್ಲಿ ವಾಹನಗಳಿಗೂ ಪ್ರವಾಸಿಗರು ಅಡ್ಡ ಬರುತ್ತಾರೆ.


ಅಪಘಾತ, ಟ್ರಾಫಿಕ್ ಜಾಮ್ ಗೂ ಆಹ್ವಾನ ನೀಡಿದಂತಾಗುತ್ತದೆ. ಜಲಪಾತಗಳ ಬಳಿ ಪೊಲೀಸರ ಬೀಟ್ ಹಾಕುವಂತೆ ಸ್ಥಳಿಯರ ಮನವಿ ಮಾಡಿದ್ದಾರೆ.
ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೆಲವು ಪ್ರವಾಸಿಗರು ಮುಂದಾಗುತ್ತಾರೆ ಎಂಬ ದೂರು ಕೂಡ ಕೇಳಿ ಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು