2:28 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಲಾರಿ: ತಾಸುಗಟ್ಟಲೆ ವಾಹನ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ

20/07/2022, 10:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ನಡುವಿನ ಚಾರ್ಮಾಡಿ ಘಾಟಿಯಲ್ಲಿ ಲಾರಿಯೊಂದು‌ ಕೆಟ್ಟು ನಿಂತ ಪರಿಣಾಮ ತಾಸುಗಟ್ಟಲೆ ವಾಹನ ಸಂಚಾರಕ್ಕೆ ತಡೆಯುಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಯಿತು.

ಘಾಟಿಯ 10ನೇ ತಿರುವಿನಲ್ಲಿ ಮಂಗಳವಾರ ರಾತ್ರಿ ಸುಮಾರು 8.30ರ ಸುಮಾರಿಗೆ  ಇಂಧನ ತುಂಬಿದ ಟ್ಯಾಂಕರ್ ತಾಂತ್ರಿಕ ದೋಷದಿಂದ ಮಾರ್ಗ ಮದ್ಯೆ ಕೆಟ್ಟು ನಿಂತಿತ್ತು. ಇದರ ಪರಿಣಾಮ ಇತರ ವಾಹನಗಳ ಸುಗಮ ಸಂಚಾರಕ್ಕೆ ತಡೆಯುಂಟಾಯಿತು. ಬೆಂಗಳೂರು ಸೇರಿಂತೆ ಇನ್ನಿತರ ಕಡೆಗಳಿಗೆ ಹೋಗುವ ಬಸ್ಸು ಹಾಗೂ ಇತರ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಯಿತು. ಈ ಬಗ್ಗೆ ಮಾಹಿತಿ ಪಡೆದ ಹೊಯ್ಸಳದ ಪೊಲೀಸರು ಕೊಟ್ಟಿಗೆಹಾರದ ಚಾರ್ಮಾಡಿ ಗೇಟ್ ಬಳಿ‌ ನಿಯಂತ್ರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನಂತರ  ಕ್ರೇನ್ ತರಿಸಿ ಟ್ಯಾಂಕರ್ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 


ಈಗಾಗಲೇ ಶಿರಾಡಿ, ಸಂಪಾಜೆಯಲ್ಲಿ ಮಾರ್ಗ ಕುಸಿತದಿಂದ ವಾಹನ ಸಂಚಾರಕ್ಕೆ ತಡೆಯಾಗಿರುವುದರಿಂದ ಹೆಚ್ಚಿನ ವಾಹನ ಸಂಚಾರ ಈ ರಸ್ತೆಯಲ್ಲಿ‌ ಇದೆ. ವಾಹನ ದಟ್ಟನೆ‌ ಹಾಗೂ ಅತೀ ಹೆಚ್ಚು ಬಸ್ಸುಗಳು ಸಂಚಾರಿಸುವುದರಿಂದ‌ ನಿಯಂತ್ರಿಸಲು‌ ಪೊಲೀಸರು ಹರ ಸಾಹಸ ಪಡುವಂತಾಯಿತು. ಸ್ಥಳದಲ್ಲಿ ಹೊಯ್ಸಳದ ಪಿಎಸ್ ವೆಂಕಪ್ಪ ಮತ್ತು ಬಸವರಾಜ್, ಸಂಚಾರಿ ಠಾಣೆಯ ಪಿಎಸ್ ಐ ಓಡಿಯಪ್ಪ, ಹಾಗೂ ಶಿವರಾಮ ರೈ,,ಕುಮಾರ್  ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು