12:37 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಹಾಡಹಗಲ್ಲೇ ಕಾಡಾನೆ ಸಂಚಾರ: ಸ್ವಲ್ಪದರಲ್ಲೇ ಬೈಕ್ ಸವಾರ ಪಾರು; ನೀರಿಗಾಗಿ ಪರದಾಟ ಶಂಕೆ

08/04/2024, 21:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು- ಚಿಕ್ಕಮಗಳೂರು ಸಂಪಕರ್ಕಿಸುವ ಚಾರ್ಮಾಡಿ ಘಾಟಿಯ 9ನೇ ತಿರುವಿನ ಸಮೀಪ ಒಂಟಿ ಸಲಗ ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಕಂಡುಬಂದಿದೆ.
ಸೋಮವಾರ ನೆರಿಯದ ಬಾಂಜಾರು ಮಲೆ ಕಡೆಯಿಂದ ಆಗಮಿಸಿದ ಕಾಡಾನೆ ಕೆಲವು ಹೊತ್ತು ರಸ್ತೆ ಬದಿಯಲ್ಲಿ ನಿಂತುಕೊಂಡು ಬಳಿಕ ಅಲ್ಲಿಂದ ತೆರಳಿ ರಸ್ತೆಯಲ್ಲಿ ಒಂದಿಷ್ಟು ಹೊತ್ತು ಸಂಚರಿಸಿ ಮತ್ತೆ ನೆರಿಯ ಕಾಡಿನ ಕಡೆಗೆ ತೆರಳಿದೆ.
-ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರ-
ರಸ್ತೆ ಬದಿ ಆನೆಯನ್ನು ಗಮನಿಸಿದ ವಾಹನ ಸವಾರರು ಆನೆ ದಾಟಿ ಹೋಗಲು ಅನುಕೂಲವಾಗುವಂತೆ ಇಕ್ಕೆಲಗಳಲ್ಲೂ ವಾಹನಗಳನ್ನು ನಿಲ್ಲಿಸಿದ್ದರು. ಆದರೆ ರಸ್ತೆಯ ಒಂದು ಬದಿಯಲ್ಲಿ ವಾಹನಗಳಿಲ್ಲದ ಕಾರಣ ಆನೆ ಇರುವುದನ್ನು ತಿಳಿಯದ ಬೈಕ್ ಸವಾರರೊಬ್ಬ ಆನೆ ದಾಟುತ್ತಿರುವ ಸಮಯದಲ್ಲೇ ಸಂಚರಿಸಿದ್ದು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾನೆ. ಉಳಿದ ವಾಹನ ಸವಾರರು ಆನೆ ಇರುವುದರ ಬಗ್ಗೆ ಆತನ ಗಮನಕ್ಕೆ ತಂದರು ಅದನ್ನು ತಿಳಿಯದ ಆತ ಸಂಚಾರ ನಡೆಸಿದ್ದಾನೆ. ಈ ದೃಶ್ಯವನ್ನು ಪ್ರಯಾಣಿಕರು ವಿಡಿಯೋ ಚಿತ್ರೀಕರಣ ಮಾಡಿದ್ದು,ಅದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಶನಿವಾರ ರಾತ್ರಿ ಕಾಡಾನೆ ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜದ ತೋಟವೊಂದರಲ್ಲಿ ದಾಂಧಲೆ ನಡೆಸಿದ್ದು ಬಳಿಕ ಭಾನುವಾರ ರಾತ್ರಿ ಚಾರ್ಮಾಡಿ ಬಳಿ ಕಂಡುಬಂದಿದ್ದು ಸ್ಥಳೀಯರು ಹಾಗೂ ಇಲಾಖೆಯವರು ಸೇರಿ ಆನೆಯನ್ನು ಕಾಡಿಗಟ್ಟಿದ್ದರು. ಈ ಸಮಯ ಅದು ನೆರಿಯ ಕಾಡಿನೊಳಗೆ ಓಡಿತ್ತು. ಅದರ ಬಳಿಕ ಸೋಮವಾರ ನೆರಿಯದ ಬಾಂಜಾರು ಮಲೆ ಮೂಲಕ ಚಾರ್ಮಾಡಿ ಘಾಟಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ. ಕಲ್ಮಂಜದಲ್ಲಿ ದಾಂಧಲೆ ನಡೆಸಿದ ಆನೆ ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯಕ್ಷವಾಗಿರುವ ಅನುಮಾನಗಳು ಮೂಡಿವೆ.
ಪ್ರಸ್ತುತ ಕಾಡಿನ ಕೆರೆಗಳು, ನೇತ್ರಾವತಿ ನದಿ ಸಂಪೂರ್ಣ ಒಣಗಿದ್ದು ಕೇವಲ ಮೃತ್ಯುಂಜಯ ನದಿಯಲ್ಲಿ ಮಾತ್ರ ನೀರು ಹರಿಯುತ್ತಿದ್ದು, ಈ ನದಿ ಹರಿಯುವ ನೆರಿಯ, ಚಾರ್ಮಾಡಿ ಈ ಭಾಗದಲ್ಲಿ ಕಾಡಾನೆ ಆಶ್ರಯ ಪಡೆದಿರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು