5:57 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್: ಹಂದಿಗಳ ಕಳೇಬರ ಎಸೆದು ಹೋದ ಕಿಡಿಗೇಡಿಗಳು; ಗಬ್ಬು ವಾಸನೆ

18/11/2022, 11:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್‍ನ ಮಲಯ ಮಾರುತ ಸಮೀಪ ಕಿಡಿಗೇಡಿಗಳು ರಸ್ತೆ ಬದಿಯಲ್ಲಿ ಹಂದಿಗಳ ಕಳೇಬರವನ್ನು ಎಸೆದು ಹೋದ ಘಟನೆ ನಡೆದಿದೆ.
ನಾಲ್ಕಕ್ಕೂ ಹೆಚ್ಚು ಬಾರಿ ಗಾತ್ರ ಹಂದಿಗಳನ್ನು ಎಸೆದು ಹೋಗಿದ್ದು ರಸ್ತೆ ಬದಿಯಲ್ಲಿ ಎಸೆದಿರುವುದರಿಂದ ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಮೂಗು ಮುಚ್ಚಿಕೊಂಡು ತಿರುಗಾಡುವಂತಾಗಿದೆ.


ಸಮೀಪದಲ್ಲೆ ತೊರೆಯೊಂದು ಹರಿಯುತ್ತಿದ್ದು ಹಂದಿಯ ಕಳೇಬರ ಕೊಳೆತು ತೊರೆಯನ್ನು ಸೇರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಂಗಳೂರು ಕಡೆಗೆ ಹಂದಿಗಳನ್ನು ಸಾಗಾಟ ಮಾಡುವ ವಾಹನ ಚಾಲಕರು ಸತ್ತ ಹಂದಿಗಳನ್ನು ಹೀಗೆ ಎಸೆದು ಹೋಗಿರುವ ಸಾಧ್ಯತೆ ಇದ್ದು ಹೀಗೆ ಎಸೆದು ಹೋಗಿರುವವರ ವಿರುದ್ದ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು