3:10 AM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ: 3 ದಿನದಿಂದ ಹೊತ್ತಿ ಉರಿಯುತ್ತಿರುವ ಅರಣ್ಯ; ಬದುಕುಳಿಯಲು ನಾಡಿಗೆ ಬಂದ ಕಾಳಿಂಗ!!

07/03/2023, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ನಾಡಿನತ್ತ ಮುಖ ಮಾಡಿವೆ.


ಮರದ ಪೊಟರೆ, ಭೂಮಿಯ ಒಳಗೆ ಹೆಚ್ಚಾಗಿ ವಾಸ ಮಾಡುವ ಕಾಳಿಂಗ ಸರ್ಪಗಳು ಮರದಲ್ಲೂ ಇರಲಾಗದೆ, ಬೆಂಕಿ ಬಿದ್ದ ಭೂಮಿಯ ತಾಪದಿಂದ ಭೂಮಿಯ ಒಳಗೂ ಇರಲಾರದೆ ನಾಡಿನತ್ತ ಮುಖ ಮಾಡಿವೆ. ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ತುರುವೆ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಆಶ್ರಯ ಪಡೆದುಕೊಳ್ಳಲು ಜಾಗ ಹುಡುಕುತ್ತಿರುವಾಗ ಸ್ಥಳಿಯರ ಕಣ್ಣಿಗೆ ಬಿದ್ದು ಸೆರೆಯಾಗಿದೆ. ತುರುವೆ ಗ್ರಾಮದ ಸಮುದಾಯ ಭವನದ ಬಳಿ ಬಂದ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಬೆಚ್ಚನೆಯ ಜಾಗ ಹುಡುಕುತ್ತಿದ್ದ ವೇಳೆ ಸ್ಥಳಿಯರ ಕಣ್ಣಿಗೆ ಬಿದ್ದಿದೆ. ದೈತ್ಯಾಕಾರದ ಕಾಳಿಂಗ ಸರ್ಪವನ್ನ ಕಂಡ ಸ್ಥಳಿಯರು ಆತಂಕದಿಂದ ಕೂಗಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುಮಾರು ಅರ್ಧ ಗಂಟೆಗಳ ಕಾರ್ಯಾಚರಣೆ ನಡೆಸಿ ದೈತ್ಯ ಕಾಳಿಂಗನನ್ನ ಸೆರಿ ಹಿಡಿದಿದ್ದಾರೆ. ಸೆರೆ ಹಿಡಿದು ಬಳಿಕ ತೀವ್ರ ನಿತ್ರಾಣಗೊಂಡಿದ್ದ ಕಾಳಿಂಗ ಸರ್ಪಕ್ಕೆ ಹಾವಾಡಿಗ ನೀರು ಕುಡಿಸಿದ್ದಾನೆ. ಈ ಕಾಳಿಂಗ ಸರ್ಪ ಎಷ್ಟು ದೈತ್ಯಾಕಾರವಿದೆ ಅಂದ್ರೆ, ಸೆರೆ ಹಿಡಿದ ಸ್ನೇಕ್ ಆರೀಫ್ ಅದನ್ನ ಎತ್ತಿಕೊಳ್ಳಲು ಕಷ್ಟಪಡಬೇಕಾದಷ್ಟು ಭಾರವಾಗಿತ್ತು ಈ ಕಾಳಿಂಗ ಸರ್ಪ. ಕೊನೆಗೆ ಸೆರೆ ಹಿಡಿದ ಕಾಳಿಂಗ ಸರ್ಪವನ್ನ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಚಾರ್ಮಾಡಿ ಘಾಟಿಯಲ್ಲೇ ಬೆಂಕಿ ಬೀಳದ ಪ್ರದೇಶಕ್ಕೆ ಬಿಟ್ಟಿದ್ದಾರೆ. ಆದರೆ, ಚಾರ್ಮಾಡಿ ಘಾಟಿಯ ಸುತ್ತಮುತ್ತಲಿನ ಜನ ಭಯದಲ್ಲಿ ಬದುಕುವಂತಾಗಿದೆ. ಅರಣ್ಯಕ್ಕೆ ಬಿದ್ದಿರೋ ಬೆಂಕಿ ನಿಲ್ಲುವಂತೆ ಕಾಣುತ್ತಿಲ್ಲ. ಮೂರು ದಿನಗಳಿಂದ ಒಂದೇ ಸಮನೆ ಹೊತ್ತಿ ಧಗಧಗಿಸುತ್ತಿದೆ. ಈ ವೇಳೆ ಕಾಡುಪ್ರಾಣಿಗಳು ಕಾಡಂಚಿನ ಗ್ರಾಮಗಳಿಗೆ ಬಂದರೆ ಏನು ಮಾಡುವುದು, ಬದುಕುವುದು ಹೇಗೆಂದು ಜನ ಆತಂಕದಿಂದ ಬದುಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು