10:48 AM Monday12 - May 2025
ಬ್ರೇಕಿಂಗ್ ನ್ಯೂಸ್
Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿ: 3 ದಿನದಿಂದ ಹೊತ್ತಿ ಉರಿಯುತ್ತಿರುವ ಅರಣ್ಯ; ಬದುಕುಳಿಯಲು ನಾಡಿಗೆ ಬಂದ ಕಾಳಿಂಗ!!

07/03/2023, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ವ್ಯಾಪ್ತಿಗೆ ಸೇರುವ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶ ಕಳೆದ ಮೂರು ದಿನಗಳಿಂದ ನಿರಂತರವಾಗಿ ಹೊತ್ತಿ ಉರಿಯುತ್ತಿದೆ. ಚಾರ್ಮಾಡಿಯ ದಟ್ಟಕಾನನದಲ್ಲಿದ್ದ ಆಶ್ರಯ ಪಡೆದುಕೊಂಡಿದ್ದ ನೂರಾರು ಪ್ರಾಣಿಪಕ್ಷಿಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿವೆ. ಆದರೆ, ಕೆಲ ಪ್ರಾಣಿಗಳು ಜೀವ ಉಳಿಸಿಕೊಳ್ಳಲು ನಾಡಿನತ್ತ ಮುಖ ಮಾಡಿವೆ.


ಮರದ ಪೊಟರೆ, ಭೂಮಿಯ ಒಳಗೆ ಹೆಚ್ಚಾಗಿ ವಾಸ ಮಾಡುವ ಕಾಳಿಂಗ ಸರ್ಪಗಳು ಮರದಲ್ಲೂ ಇರಲಾಗದೆ, ಬೆಂಕಿ ಬಿದ್ದ ಭೂಮಿಯ ತಾಪದಿಂದ ಭೂಮಿಯ ಒಳಗೂ ಇರಲಾರದೆ ನಾಡಿನತ್ತ ಮುಖ ಮಾಡಿವೆ. ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ತುರುವೆ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಆಶ್ರಯ ಪಡೆದುಕೊಳ್ಳಲು ಜಾಗ ಹುಡುಕುತ್ತಿರುವಾಗ ಸ್ಥಳಿಯರ ಕಣ್ಣಿಗೆ ಬಿದ್ದು ಸೆರೆಯಾಗಿದೆ. ತುರುವೆ ಗ್ರಾಮದ ಸಮುದಾಯ ಭವನದ ಬಳಿ ಬಂದ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪ ಬೆಚ್ಚನೆಯ ಜಾಗ ಹುಡುಕುತ್ತಿದ್ದ ವೇಳೆ ಸ್ಥಳಿಯರ ಕಣ್ಣಿಗೆ ಬಿದ್ದಿದೆ. ದೈತ್ಯಾಕಾರದ ಕಾಳಿಂಗ ಸರ್ಪವನ್ನ ಕಂಡ ಸ್ಥಳಿಯರು ಆತಂಕದಿಂದ ಕೂಗಿದ್ದಾರೆ. ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಸುಮಾರು ಅರ್ಧ ಗಂಟೆಗಳ ಕಾರ್ಯಾಚರಣೆ ನಡೆಸಿ ದೈತ್ಯ ಕಾಳಿಂಗನನ್ನ ಸೆರಿ ಹಿಡಿದಿದ್ದಾರೆ. ಸೆರೆ ಹಿಡಿದು ಬಳಿಕ ತೀವ್ರ ನಿತ್ರಾಣಗೊಂಡಿದ್ದ ಕಾಳಿಂಗ ಸರ್ಪಕ್ಕೆ ಹಾವಾಡಿಗ ನೀರು ಕುಡಿಸಿದ್ದಾನೆ. ಈ ಕಾಳಿಂಗ ಸರ್ಪ ಎಷ್ಟು ದೈತ್ಯಾಕಾರವಿದೆ ಅಂದ್ರೆ, ಸೆರೆ ಹಿಡಿದ ಸ್ನೇಕ್ ಆರೀಫ್ ಅದನ್ನ ಎತ್ತಿಕೊಳ್ಳಲು ಕಷ್ಟಪಡಬೇಕಾದಷ್ಟು ಭಾರವಾಗಿತ್ತು ಈ ಕಾಳಿಂಗ ಸರ್ಪ. ಕೊನೆಗೆ ಸೆರೆ ಹಿಡಿದ ಕಾಳಿಂಗ ಸರ್ಪವನ್ನ ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಚಾರ್ಮಾಡಿ ಘಾಟಿಯಲ್ಲೇ ಬೆಂಕಿ ಬೀಳದ ಪ್ರದೇಶಕ್ಕೆ ಬಿಟ್ಟಿದ್ದಾರೆ. ಆದರೆ, ಚಾರ್ಮಾಡಿ ಘಾಟಿಯ ಸುತ್ತಮುತ್ತಲಿನ ಜನ ಭಯದಲ್ಲಿ ಬದುಕುವಂತಾಗಿದೆ. ಅರಣ್ಯಕ್ಕೆ ಬಿದ್ದಿರೋ ಬೆಂಕಿ ನಿಲ್ಲುವಂತೆ ಕಾಣುತ್ತಿಲ್ಲ. ಮೂರು ದಿನಗಳಿಂದ ಒಂದೇ ಸಮನೆ ಹೊತ್ತಿ ಧಗಧಗಿಸುತ್ತಿದೆ. ಈ ವೇಳೆ ಕಾಡುಪ್ರಾಣಿಗಳು ಕಾಡಂಚಿನ ಗ್ರಾಮಗಳಿಗೆ ಬಂದರೆ ಏನು ಮಾಡುವುದು, ಬದುಕುವುದು ಹೇಗೆಂದು ಜನ ಆತಂಕದಿಂದ ಬದುಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು