2:45 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್

13/06/2024, 12:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು