9:40 AM Thursday23 - October 2025
ಬ್ರೇಕಿಂಗ್ ನ್ಯೂಸ್
ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್

13/06/2024, 12:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು