10:30 PM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್

13/06/2024, 12:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು