1:19 AM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್

13/06/2024, 12:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು