2:40 AM Monday4 - May 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್

13/06/2024, 12:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು