5:33 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್

13/06/2024, 12:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು