11:56 AM Tuesday28 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್

13/06/2024, 12:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು