4:07 AM Monday21 - October 2024
ಬ್ರೇಕಿಂಗ್ ನ್ಯೂಸ್
ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್

13/06/2024, 12:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಂಗಳೂರು ಮತ್ತು ಚಿಕ್ಕಮಗಳೂರು ಸಂಪರ್ಕಿಸುವ
ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಯೊಂದು ಸರಕಾರಿ ಬಸ್ಸಿಗೆ ಅಡ್ಡ ಬಂದ ಘಟನೆ ಬುಧವಾರ ರಾತ್ರಿ ನಡೆದಿದೆ.
ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಹೋದ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದಾರೆ. ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ಒಂಟಿ ಸಲಗ ನಿಂತಿತ್ತು.

ಚಾರ್ಮಾಡಿ ಘಾಟಿಯಲ್ಲಿ ಸರಕಾರಿ ಬಸ್ಸಿಗೆ ಅಡ್ಡ ನಿಂತ ಕಾಡಾನೆ: ಅರ್ಧ ತಾಸಿಗೂ ಹೆಚ್ಚು ಕಾಲ ದಾರಿ ತೆರವುಗೊಳಿಸದ ಒಂಟಿ ಸಲಗ; ಭಾರೀ ಟ್ರಾಫಿಕ್ ಜಾಮ್
ಆನೆಯನ್ನು ಕಂಡು ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದರು. ಇದರಿಂದ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಯಿತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಗೆ ಕಾಡಾನೆ ಕಾರಣವಾಯಿತು. ಸುಮಾರು ಅರ್ಧ ಗಂಟೆ ಬಳಿಕ ಆನೆ ಕಾಡಿನತ್ತ ತೆರಳಿತು.
ಕಳೆದ ಎರಡು ತಿಂಗಳಿಂದಲೂ ಚಾರ್ಮಾಡಿಯಲ್ಲೇ ಸಲಗ ಇದೆ.
ಹಗಲಿರುಳೆನ್ನದೇ ಚಾರ್ಮಾಡಿ ರಸ್ತೆಯಲ್ಲಿ ಸಂಚಾರ ಮಾಡುತ್ತಿದೆ. ಚಾರ್ಮಾಡಿ ಘಾಟ್ ತಪ್ಪಲಿನ ಗ್ರಾಮದೊಳಕ್ಕೂ ಕೂಡ ಕಾಡಾನೆ ಬಂದಿತ್ತು. ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳಿಯರ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು