12:03 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ ಕಸ ತೆರವು

02/07/2024, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ.ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾ ಮಾತನಾಡಿ’ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ್ಲಿದ್ದ ಕಸವನ್ನು ಘಾಟಿಯಲ್ಲಿ ಬಿಸಾಕಿ ಮಂಗಳೂರು ಭಾಗದಿಂದ ಕೊಟ್ಟಿಗೆಹಾರ ಕಡೆಗೆ ತೆರಳಿದ್ದ. ಅದರ ಜಾಡು ಹಿಡಿದು ಚಾರ್ಮಾಡಿ ಘಾಟಿಗೆ ಗಸ್ತಿನಲ್ಲಿದ್ದ ಪಿಎಸ್ ಐ ವಾಹನವನ್ನು ಗೇಟ್ ನಲ್ಲಿ ಹಿಡಿದು ವಾಪಾಸ್ ಕರೆ ತಂದು ಅದೇ ಕಸವನ್ನು ತುಂಬಿಸಿ ಚಾಲಕನಿಗೆ ಬಣಕಲ್ ಠಾಣೆಯಲ್ಲಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿ ದಂಡ ವಿಧಿಸಿ ಕಸವನ್ನು ಅಲ್ಲಿಂದ ಅವರಿಂದಲೇ ತೆರವು ಗೊಳಿಸಿ ಚಾಲಕನಿಗೆ ತಾನು ಮಾಡಿದ ತಪ್ಪಿನ ಅರಿವು ಮೂಡಿಸಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇದರಿಂದ ಇತರ ವಾಹನದವರು ಈ ರೀತಿ ಮಾಡದಂತೆ ಜಾಗೃತಿ ಮೂಡಿಸಿದ ಪೊಲೀಸರ ಕ್ರಮವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು