8:22 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ ಕಸ ತೆರವು

02/07/2024, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ.ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾ ಮಾತನಾಡಿ’ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ್ಲಿದ್ದ ಕಸವನ್ನು ಘಾಟಿಯಲ್ಲಿ ಬಿಸಾಕಿ ಮಂಗಳೂರು ಭಾಗದಿಂದ ಕೊಟ್ಟಿಗೆಹಾರ ಕಡೆಗೆ ತೆರಳಿದ್ದ. ಅದರ ಜಾಡು ಹಿಡಿದು ಚಾರ್ಮಾಡಿ ಘಾಟಿಗೆ ಗಸ್ತಿನಲ್ಲಿದ್ದ ಪಿಎಸ್ ಐ ವಾಹನವನ್ನು ಗೇಟ್ ನಲ್ಲಿ ಹಿಡಿದು ವಾಪಾಸ್ ಕರೆ ತಂದು ಅದೇ ಕಸವನ್ನು ತುಂಬಿಸಿ ಚಾಲಕನಿಗೆ ಬಣಕಲ್ ಠಾಣೆಯಲ್ಲಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿ ದಂಡ ವಿಧಿಸಿ ಕಸವನ್ನು ಅಲ್ಲಿಂದ ಅವರಿಂದಲೇ ತೆರವು ಗೊಳಿಸಿ ಚಾಲಕನಿಗೆ ತಾನು ಮಾಡಿದ ತಪ್ಪಿನ ಅರಿವು ಮೂಡಿಸಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇದರಿಂದ ಇತರ ವಾಹನದವರು ಈ ರೀತಿ ಮಾಡದಂತೆ ಜಾಗೃತಿ ಮೂಡಿಸಿದ ಪೊಲೀಸರ ಕ್ರಮವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು