11:33 AM Thursday26 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ

09/01/2025, 23:18

ಕೊಟ್ಟಿಗೆಹಾರ(reporterkarnataka.com):ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಡಕೋಟ ಬಸ್ ಗಳ ಸಂಖ್ಯೆ ಹೆಚ್ಚಾಗಿ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು ಆತಂಕ್ಕೀಡಾಗುವಂತಾಗಿದೆ. ಬಯಲುಸೀಮೆ ಭಾಗದಲ್ಲಿ ಬಸ್ ಕೆಟ್ಟು ನಿಂತರೆ ಭಯಬೀಳುವ ಅಗತ್ಯವಿಲ್ಲ. ಆದರೆ, ಮಲೆನಾಡಲ್ಲಿ, ಅದರಲ್ಲೂ ಕಾಡಿನ ಮಾರ್ಗದಲ್ಲಿ ಬಸ್ ಕೆಟ್ಟರೆ ಜನ ಆತಂಕಕ್ಕೀಡಾಗಬೇಕಾಗುತ್ತದೆ. ಇಂದು ಕೂಡ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಚಾರ್ಮಾಡಿ ಘಾಟಿಯಂತಹಾ ದಟ್ಟ ಕಾನನದ ಮಧ್ಯೆ ಕೆಟ್ಟು ನಿಂತಿದ್ದು ಸಾರ್ವಜನಿಕರ ಆಕ್ರೋಶ-ಆತಂಕಕ್ಕೆ ಕಾರಣವಾಗಿದೆ.
ಚಾರ್ಮಾಡಿ ಘಾಟಿ ದಟ್ಟ ಕಾನನದ ಮಾರ್ಗ. ಈ ಮಾರ್ಗದ ಸಂಚಾರ ಹಗಲು-ರಾತ್ರಿ ಎರಡೂ ಹೊತ್ತಲ್ಲೂ ಕಷ್ಟ ಹಾಗೂ ಆತಂಕವೇ ಸರಿ. ಯಾಕಂದ್ರೆ, ಚಾರ್ಮಾಡಿ ಘಾಟಿಯಲ್ಲಿ ಹಗಲು-ರಾತ್ರಿ ಎನ್ನದೆ ಎಲ್ಲೆಂದರಲ್ಲಿ, ಯಾವಾಗೆಂದರೆ ಆವಾಗ ಕಾಡಾನೆ ಹಾವಳಿ ಇದೆ. ಕೆಲವರು ಜಸ್ಟ್ ಮಿಸ್ ಆಗಿದ್ದಾರೆ. ಕೆಲವರು ಗಾಡಿ ವಾಪಸ್ ತಿರುಗಿಸಿದ್ದಾರೆ. ಕೆಲವರು ಗಂಟೆ-ಗಂಟೆಗಟ್ಟಲೇ ನಿಂತಲ್ಲೇ ನಿಂತಿದ್ದಾರೆ. ಇಂತಹಾ ಅಪಾಯದ ರಸ್ತೆಯಲ್ಲಿ ಸರ್ಕಾರಿ ಬಸ್ ಕೆಟ್ಟು ನಿಂತಿದ್ದು ಜನ ಗ್ಯಾರಂಟಿ ಸರ್ಕಾರದ ವಾರಂಟಿ ಇಲ್ಲದ ಬಸ್ ಸಂಚಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿಮ್ಮ ಉಚಿತ ಬಸ್ ಸೌಲಭ್ಯ ಬೇಡ. ಸರ್ಕಾರಿ ಬಸ್ ಗಳಿಗೆ ಕಾಯಕಲ್ಪ ಕಲ್ಪಿಸಿ ಎಂದು ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ. ರಸ್ತೆ ಮಧ್ಯೆ ಬಸ್ ಗಳು ಕೆಟ್ಟು ನಿಂತರೆ ಈಗ ಪ್ರಯಾಣಿಕರು ಸಾಕಷ್ಟು ಕಷ್ಟ ಅನುಭವಿಸಬೇಕಾಗುತ್ತೆ. ಏಕೆಂದರೆ, ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಬಸ್ ಗಳ ಸಂಖ್ಯೆ ಕಡಿಮೆಯಾಗಿದೆ. ಹಿಂದೆ ಮತ್ತೊಂದು ಬಸ್ ಬಂದರೂ ಫುಲ್ ರಷ್ ಇರಲಿದೆ. ಆ ಬಸ್ಸಿಗೆ ಮತ್ತೊಂದು ಬಸ್ಸಿನ ಜನ ಹತ್ತಿಸಲು ಆಗಲ್ಲ. ಹಾಗಾಗಿ, ರಸ್ತೆ ಮಧ್ಯೆ ಸರ್ಕಾರಿ ಬಸ್ ಗಳು ಕೆಟ್ಟು ನಿಂತರೆ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಲಿದ್ದು, ಸರ್ಕಾರ ಸರ್ಕಾರಿ ಬಸ್ ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಭಾಗ್ಯವನ್ನ ನೀಡಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು