3:08 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ

09/01/2025, 23:18

ಕೊಟ್ಟಿಗೆಹಾರ(reporterkarnataka.com):ಇತ್ತೀಚೆಗೆ ರಾಜ್ಯದಲ್ಲಿ ಸರ್ಕಾರಿ ಡಕೋಟ ಬಸ್ ಗಳ ಸಂಖ್ಯೆ ಹೆಚ್ಚಾಗಿ ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದ್ದು ಪ್ರಯಾಣಿಕರು ಆತಂಕ್ಕೀಡಾಗುವಂತಾಗಿದೆ. ಬಯಲುಸೀಮೆ ಭಾಗದಲ್ಲಿ ಬಸ್ ಕೆಟ್ಟು ನಿಂತರೆ ಭಯಬೀಳುವ ಅಗತ್ಯವಿಲ್ಲ. ಆದರೆ, ಮಲೆನಾಡಲ್ಲಿ, ಅದರಲ್ಲೂ ಕಾಡಿನ ಮಾರ್ಗದಲ್ಲಿ ಬಸ್ ಕೆಟ್ಟರೆ ಜನ ಆತಂಕಕ್ಕೀಡಾಗಬೇಕಾಗುತ್ತದೆ. ಇಂದು ಕೂಡ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಚಾರ್ಮಾಡಿ ಘಾಟಿಯಂತಹಾ ದಟ್ಟ ಕಾನನದ ಮಧ್ಯೆ ಕೆಟ್ಟು ನಿಂತಿದ್ದು ಸಾರ್ವಜನಿಕರ ಆಕ್ರೋಶ-ಆತಂಕಕ್ಕೆ ಕಾರಣವಾಗಿದೆ.
ಚಾರ್ಮಾಡಿ ಘಾಟಿ ದಟ್ಟ ಕಾನನದ ಮಾರ್ಗ. ಈ ಮಾರ್ಗದ ಸಂಚಾರ ಹಗಲು-ರಾತ್ರಿ ಎರಡೂ ಹೊತ್ತಲ್ಲೂ ಕಷ್ಟ ಹಾಗೂ ಆತಂಕವೇ ಸರಿ. ಯಾಕಂದ್ರೆ, ಚಾರ್ಮಾಡಿ ಘಾಟಿಯಲ್ಲಿ ಹಗಲು-ರಾತ್ರಿ ಎನ್ನದೆ ಎಲ್ಲೆಂದರಲ್ಲಿ, ಯಾವಾಗೆಂದರೆ ಆವಾಗ ಕಾಡಾನೆ ಹಾವಳಿ ಇದೆ. ಕೆಲವರು ಜಸ್ಟ್ ಮಿಸ್ ಆಗಿದ್ದಾರೆ. ಕೆಲವರು ಗಾಡಿ ವಾಪಸ್ ತಿರುಗಿಸಿದ್ದಾರೆ. ಕೆಲವರು ಗಂಟೆ-ಗಂಟೆಗಟ್ಟಲೇ ನಿಂತಲ್ಲೇ ನಿಂತಿದ್ದಾರೆ. ಇಂತಹಾ ಅಪಾಯದ ರಸ್ತೆಯಲ್ಲಿ ಸರ್ಕಾರಿ ಬಸ್ ಕೆಟ್ಟು ನಿಂತಿದ್ದು ಜನ ಗ್ಯಾರಂಟಿ ಸರ್ಕಾರದ ವಾರಂಟಿ ಇಲ್ಲದ ಬಸ್ ಸಂಚಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಿಮ್ಮ ಉಚಿತ ಬಸ್ ಸೌಲಭ್ಯ ಬೇಡ. ಸರ್ಕಾರಿ ಬಸ್ ಗಳಿಗೆ ಕಾಯಕಲ್ಪ ಕಲ್ಪಿಸಿ ಎಂದು ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ. ರಸ್ತೆ ಮಧ್ಯೆ ಬಸ್ ಗಳು ಕೆಟ್ಟು ನಿಂತರೆ ಈಗ ಪ್ರಯಾಣಿಕರು ಸಾಕಷ್ಟು ಕಷ್ಟ ಅನುಭವಿಸಬೇಕಾಗುತ್ತೆ. ಏಕೆಂದರೆ, ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಬಸ್ ಗಳ ಸಂಖ್ಯೆ ಕಡಿಮೆಯಾಗಿದೆ. ಹಿಂದೆ ಮತ್ತೊಂದು ಬಸ್ ಬಂದರೂ ಫುಲ್ ರಷ್ ಇರಲಿದೆ. ಆ ಬಸ್ಸಿಗೆ ಮತ್ತೊಂದು ಬಸ್ಸಿನ ಜನ ಹತ್ತಿಸಲು ಆಗಲ್ಲ. ಹಾಗಾಗಿ, ರಸ್ತೆ ಮಧ್ಯೆ ಸರ್ಕಾರಿ ಬಸ್ ಗಳು ಕೆಟ್ಟು ನಿಂತರೆ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಲಿದ್ದು, ಸರ್ಕಾರ ಸರ್ಕಾರಿ ಬಸ್ ಗಳು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುವ ಭಾಗ್ಯವನ್ನ ನೀಡಿದೆ ಎಂದು ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು