7:29 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಶವ ಶೋಧಕ್ಕೆ ತೆರೆ: ಬರಿಗೈಯಲ್ಲಿ ವಾಪಸಾದ ಬೆಂಗಳೂರು ಪೊಲೀಸ್ ತಂಡ

05/01/2023, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತೆ ಬೆಂಗಳೂರಿಗೆ ರಾತ್ರಿ ಪ್ರಯಾಣ ಬೆಳೆಸಿದರು.

ಆರೋಪಿಗಳು ಶವ ಎಸೆದ ಜಾಗವನ್ನು ಗುರುತು ಹಚ್ಚದೇ ಇರುವುದೇ ಶವ ಶೋಧ ಕಾರ್ಯ ವಿಳಂಬವಾಗಲು ಕಾರಣವಾಯಿತು. ಮೂರು ದಿನ ಕಬ್ಬನ್ ಪಾರ್ಕ್ ಮತ್ತು ಅಶೋಕ ನಗರ ಪೊಲೀಸರು ಮೂಡಿಗೆರೆಯ ಸಾಮಾಜಿಕ ಸಕ್ರೀಯ ಕಾರ್ಯಕರ್ತರು, ಸಮಾಜ ಸೇವಕ ಮೊಹಮ್ಮದ್ ಆರೀಪ್ ಹಾಗೂ ಸ್ಥಳೀಯರ ಸಹಕಾರದಿಂದ ಚಾರ್ಮಾಡಿ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮುಂದಿನ ಪ್ರಪಾತ, ಸೋಮನಕಾಡು ಹಾಗೂ ದಕ್ಷಿಣ ಕನ್ನಡ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹಲವೆಡೆ ಇಂಚಿಂಚು ಶೋಧ ಕಾರ್ಯಾಚರಣೆ ನಡೆಸಿ ಶವ ಹಾಕಿದ್ದ ಗೋಣಿಚೀಲ ಶೋಧಿಸಿದರೂ ಶವ ಸಿಗದೇ ಕರೆ ತಂದಿದ್ದ ಇಬ್ಬರು ಆರೋಪಿಗಳನ್ನು ವಾಪಾಸ್ ಕರೆದುಕೊಂಡು ಹೋಗಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಶೋಧ ಕಾರ್ಯದಲ್ಲಿ ಸ್ಥಳೀಯ ಎರಡು ಜಿಲ್ಲಾ ವ್ಯಾಪ್ತಿಯ ಪತ್ರಕರ್ತರು ಕೈಜೋಡಿಸಿದ್ದರು.ಅವರೆಲ್ಲರ ಸಹಕಾರವನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಎಸಿಪಿ ರಾಜೇಂದ್ರ ಹಾಗೂ ಅವರ ವಿಶೇಷ ಪೊಲೀಸ್ ತಂಡದವರು ಅಭಿನಂದಿಸಿದರು.
ಶವ ಶೋಧ ಕಾರ್ಯಾಚರಣೆಯಲ್ಲಿ ಕಬ್ಬನ್ ಪಾರ್ಕ್ ಎಸಿಪಿ ರಾಜೇಂದ್ರ,ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ಚೈತನ್ಯ,ಅಶೋಕನಗರ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಜಿ.ಎ.ಅಶ್ವಿನಿ, ಸಹಾಯಕ ಇನ್ ಸ್ಪೆಕ್ಟರ್ ಹರಿಚಂದ್ರ, ಎಎಸೈಐ ರೇಣುಕಾ, ಪೊಲೀಸ್ ಸಿಬ್ಬಂದಿಗಳಾದ ನಂದೀಶ್, ವಸಂತ, ಜಾಕೀರ್, ಲೋಕೇಶ್, ಸೋಮು ಲಮಾಣಿ, ಪ್ರಮೋದ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು