3:32 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಶವ ಶೋಧಕ್ಕೆ ತೆರೆ: ಬರಿಗೈಯಲ್ಲಿ ವಾಪಸಾದ ಬೆಂಗಳೂರು ಪೊಲೀಸ್ ತಂಡ

05/01/2023, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತೆ ಬೆಂಗಳೂರಿಗೆ ರಾತ್ರಿ ಪ್ರಯಾಣ ಬೆಳೆಸಿದರು.

ಆರೋಪಿಗಳು ಶವ ಎಸೆದ ಜಾಗವನ್ನು ಗುರುತು ಹಚ್ಚದೇ ಇರುವುದೇ ಶವ ಶೋಧ ಕಾರ್ಯ ವಿಳಂಬವಾಗಲು ಕಾರಣವಾಯಿತು. ಮೂರು ದಿನ ಕಬ್ಬನ್ ಪಾರ್ಕ್ ಮತ್ತು ಅಶೋಕ ನಗರ ಪೊಲೀಸರು ಮೂಡಿಗೆರೆಯ ಸಾಮಾಜಿಕ ಸಕ್ರೀಯ ಕಾರ್ಯಕರ್ತರು, ಸಮಾಜ ಸೇವಕ ಮೊಹಮ್ಮದ್ ಆರೀಪ್ ಹಾಗೂ ಸ್ಥಳೀಯರ ಸಹಕಾರದಿಂದ ಚಾರ್ಮಾಡಿ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮುಂದಿನ ಪ್ರಪಾತ, ಸೋಮನಕಾಡು ಹಾಗೂ ದಕ್ಷಿಣ ಕನ್ನಡ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹಲವೆಡೆ ಇಂಚಿಂಚು ಶೋಧ ಕಾರ್ಯಾಚರಣೆ ನಡೆಸಿ ಶವ ಹಾಕಿದ್ದ ಗೋಣಿಚೀಲ ಶೋಧಿಸಿದರೂ ಶವ ಸಿಗದೇ ಕರೆ ತಂದಿದ್ದ ಇಬ್ಬರು ಆರೋಪಿಗಳನ್ನು ವಾಪಾಸ್ ಕರೆದುಕೊಂಡು ಹೋಗಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಶೋಧ ಕಾರ್ಯದಲ್ಲಿ ಸ್ಥಳೀಯ ಎರಡು ಜಿಲ್ಲಾ ವ್ಯಾಪ್ತಿಯ ಪತ್ರಕರ್ತರು ಕೈಜೋಡಿಸಿದ್ದರು.ಅವರೆಲ್ಲರ ಸಹಕಾರವನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಎಸಿಪಿ ರಾಜೇಂದ್ರ ಹಾಗೂ ಅವರ ವಿಶೇಷ ಪೊಲೀಸ್ ತಂಡದವರು ಅಭಿನಂದಿಸಿದರು.
ಶವ ಶೋಧ ಕಾರ್ಯಾಚರಣೆಯಲ್ಲಿ ಕಬ್ಬನ್ ಪಾರ್ಕ್ ಎಸಿಪಿ ರಾಜೇಂದ್ರ,ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ಚೈತನ್ಯ,ಅಶೋಕನಗರ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಜಿ.ಎ.ಅಶ್ವಿನಿ, ಸಹಾಯಕ ಇನ್ ಸ್ಪೆಕ್ಟರ್ ಹರಿಚಂದ್ರ, ಎಎಸೈಐ ರೇಣುಕಾ, ಪೊಲೀಸ್ ಸಿಬ್ಬಂದಿಗಳಾದ ನಂದೀಶ್, ವಸಂತ, ಜಾಕೀರ್, ಲೋಕೇಶ್, ಸೋಮು ಲಮಾಣಿ, ಪ್ರಮೋದ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು