4:01 AM Friday15 - August 2025
ಬ್ರೇಕಿಂಗ್ ನ್ಯೂಸ್
‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

18/09/2024, 23:07

ಮಂಗಳೂರು(reporterkarnataka.com):ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ ಜೊತೆಯಲ್ಲಿ ಜಂಟಿಯಾಗಿ ಪಡೆಯಲಿದ್ದಾರೆ ಎಂದು ಹಿರಿಯ ಪತ್ರಕರ್ತರು, ಬಹು ಭಾಷಾ ಸಾಹಿತಿ ಹಾಗೂ ಅಖಿಲ ಭಾರತ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ತಿಳಿಸಿದ್ದಾರೆ.
ಇದೇ ಸಪ್ಟೆಂಬರ್ 22ರಂದು ರ ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಸನ್ಮಾನ ನಡೆಯಲಿದೆ.
ಕೇರಳ, ಕರ್ನಾಟಕ, ಗೋವಾ, ಆಂದ್ರ, ಮಹಾರಾಷ್ಟ್ರ, ದೆಹಲಿ ಪ್ರದೇಶದ ಕೊಂಕಣಿ ಮಾತೃಭಾಷೆ ಚಾರೊಳಿ ಸಾಹಿತಿಗಳು, ಚಿಂತಕರು, ವಿಷಯಗಳ ಮಂಡನೆ ಹಾಗೂ ಕವಿವಾಣಿ ಸಾಧರ ಪಡಿಸುವರು.
ಇದರ ಹಿಂದೆ ಮೊದಲಿಗೆ 2022 ರಲ್ಲಿ ಗೋವಾದ ಕಲಾ ಶಿಕ್ಷಕರು ಹಾಗೂ ಕವಿ, ಸಾಹಿತಿ ಗೌರೀಶ ವರ್ಣೇಕರ್ ಹಾಗೂ ಕೇರಳದ ಹಿರಿಯ ಕವಿ ಆರ್. ಎಸ್. ಭಾಸ್ಕರ್ ಹಾಗೂ 2023ರ ದ್ವಿತೀಯ ಸಮ್ಮೇಳನದಲ್ಲಿ ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ರಾಜಯ್ ಪವಾರ್ ಸನ್ಮಾನಿತರಾಗಿದ್ದರು.
ಮೊದಲ ಸಮ್ಮೇಳನ ಮಂಗಳೂರು, ದ್ವಿತೀಯ ಮತ್ತು ಇದು ತೃತೀಯ ಗೋವಾದಲ್ಲಿ ರಾಷ್ಟ್ರೀಯ ಸಮ್ಮೇಳನಗಳು ನಡೆಯುತ್ತಲಿವೆ.
ಸ್ಥಳೀಯ ಗೋವಾದ ಕವಿಕೂಟ ಉಗ್ತೆಂ ಮೊಳಬ್ ಈ ಬಾರಿಯ ಸ್ಥಳೀಯ ಸಂಯೋಜಕ ಸಂಸ್ಥೆಯಾಗಿ ಸಮ್ಮೇಳನದ ಆಯೋಜನೆ ಮಾಡಲಿದೆ.
ಕಳೆದ 2023 ರ ಗೋವಾ ರಾಜ್ಯದ ‌ಕೊಂಕಣಿ ಲೇಖಕರ ಸಂಘ ಸಮ್ಮೇಳನ ಸಂಯೋಜನೆ ಮಾಡಿದ್ದರು.
ಆಖಿಲ ಭಾರತ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಸ್ಥಾಪಕ ಆಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಈ ಬಾರಿ ಗೋವಾದ ವಿವೇಕ ಪಿಸೂಲೆಕರ್, ಗೌರೀಶ ವರ್ಣೇಕರ್, ಕಾರವಾರದ ಸಂದೇಶ ಬಾಂದೇಕರ್,ಈ ರಾಷ್ಟ್ರೀಯ ಸಮ್ಮೇಳನದ ಸಂಯೋಜನೆ ‌ಮಾಡಲು ರೇಮಂಡ್ ಡಿಕೂನಾ ತಾಕೊಡೆ ಜೊತೆಯಲ್ಲಿ ಸಂಚಾಲಕರಾಗಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು