2:32 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

18/09/2024, 23:07

ಮಂಗಳೂರು(reporterkarnataka.com):ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ ಜೊತೆಯಲ್ಲಿ ಜಂಟಿಯಾಗಿ ಪಡೆಯಲಿದ್ದಾರೆ ಎಂದು ಹಿರಿಯ ಪತ್ರಕರ್ತರು, ಬಹು ಭಾಷಾ ಸಾಹಿತಿ ಹಾಗೂ ಅಖಿಲ ಭಾರತ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ತಿಳಿಸಿದ್ದಾರೆ.
ಇದೇ ಸಪ್ಟೆಂಬರ್ 22ರಂದು ರ ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಸನ್ಮಾನ ನಡೆಯಲಿದೆ.
ಕೇರಳ, ಕರ್ನಾಟಕ, ಗೋವಾ, ಆಂದ್ರ, ಮಹಾರಾಷ್ಟ್ರ, ದೆಹಲಿ ಪ್ರದೇಶದ ಕೊಂಕಣಿ ಮಾತೃಭಾಷೆ ಚಾರೊಳಿ ಸಾಹಿತಿಗಳು, ಚಿಂತಕರು, ವಿಷಯಗಳ ಮಂಡನೆ ಹಾಗೂ ಕವಿವಾಣಿ ಸಾಧರ ಪಡಿಸುವರು.
ಇದರ ಹಿಂದೆ ಮೊದಲಿಗೆ 2022 ರಲ್ಲಿ ಗೋವಾದ ಕಲಾ ಶಿಕ್ಷಕರು ಹಾಗೂ ಕವಿ, ಸಾಹಿತಿ ಗೌರೀಶ ವರ್ಣೇಕರ್ ಹಾಗೂ ಕೇರಳದ ಹಿರಿಯ ಕವಿ ಆರ್. ಎಸ್. ಭಾಸ್ಕರ್ ಹಾಗೂ 2023ರ ದ್ವಿತೀಯ ಸಮ್ಮೇಳನದಲ್ಲಿ ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ರಾಜಯ್ ಪವಾರ್ ಸನ್ಮಾನಿತರಾಗಿದ್ದರು.
ಮೊದಲ ಸಮ್ಮೇಳನ ಮಂಗಳೂರು, ದ್ವಿತೀಯ ಮತ್ತು ಇದು ತೃತೀಯ ಗೋವಾದಲ್ಲಿ ರಾಷ್ಟ್ರೀಯ ಸಮ್ಮೇಳನಗಳು ನಡೆಯುತ್ತಲಿವೆ.
ಸ್ಥಳೀಯ ಗೋವಾದ ಕವಿಕೂಟ ಉಗ್ತೆಂ ಮೊಳಬ್ ಈ ಬಾರಿಯ ಸ್ಥಳೀಯ ಸಂಯೋಜಕ ಸಂಸ್ಥೆಯಾಗಿ ಸಮ್ಮೇಳನದ ಆಯೋಜನೆ ಮಾಡಲಿದೆ.
ಕಳೆದ 2023 ರ ಗೋವಾ ರಾಜ್ಯದ ‌ಕೊಂಕಣಿ ಲೇಖಕರ ಸಂಘ ಸಮ್ಮೇಳನ ಸಂಯೋಜನೆ ಮಾಡಿದ್ದರು.
ಆಖಿಲ ಭಾರತ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಸ್ಥಾಪಕ ಆಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಈ ಬಾರಿ ಗೋವಾದ ವಿವೇಕ ಪಿಸೂಲೆಕರ್, ಗೌರೀಶ ವರ್ಣೇಕರ್, ಕಾರವಾರದ ಸಂದೇಶ ಬಾಂದೇಕರ್,ಈ ರಾಷ್ಟ್ರೀಯ ಸಮ್ಮೇಳನದ ಸಂಯೋಜನೆ ‌ಮಾಡಲು ರೇಮಂಡ್ ಡಿಕೂನಾ ತಾಕೊಡೆ ಜೊತೆಯಲ್ಲಿ ಸಂಚಾಲಕರಾಗಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು