10:31 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ನವೀನ್ ಪಿರೇರಾ ಸುರತ್ಕಲ್ ಹಾಗೂ ಗೋವಾದ ಉದಯ್ ನರಸಿಂಹ ಮೆಂಬ್ರೊಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ

18/09/2024, 23:07

ಮಂಗಳೂರು(reporterkarnataka.com):ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿ‌ತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ ಜೊತೆಯಲ್ಲಿ ಜಂಟಿಯಾಗಿ ಪಡೆಯಲಿದ್ದಾರೆ ಎಂದು ಹಿರಿಯ ಪತ್ರಕರ್ತರು, ಬಹು ಭಾಷಾ ಸಾಹಿತಿ ಹಾಗೂ ಅಖಿಲ ಭಾರತ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ತಿಳಿಸಿದ್ದಾರೆ.
ಇದೇ ಸಪ್ಟೆಂಬರ್ 22ರಂದು ರ ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ಒಂದು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಸನ್ಮಾನ ನಡೆಯಲಿದೆ.
ಕೇರಳ, ಕರ್ನಾಟಕ, ಗೋವಾ, ಆಂದ್ರ, ಮಹಾರಾಷ್ಟ್ರ, ದೆಹಲಿ ಪ್ರದೇಶದ ಕೊಂಕಣಿ ಮಾತೃಭಾಷೆ ಚಾರೊಳಿ ಸಾಹಿತಿಗಳು, ಚಿಂತಕರು, ವಿಷಯಗಳ ಮಂಡನೆ ಹಾಗೂ ಕವಿವಾಣಿ ಸಾಧರ ಪಡಿಸುವರು.
ಇದರ ಹಿಂದೆ ಮೊದಲಿಗೆ 2022 ರಲ್ಲಿ ಗೋವಾದ ಕಲಾ ಶಿಕ್ಷಕರು ಹಾಗೂ ಕವಿ, ಸಾಹಿತಿ ಗೌರೀಶ ವರ್ಣೇಕರ್ ಹಾಗೂ ಕೇರಳದ ಹಿರಿಯ ಕವಿ ಆರ್. ಎಸ್. ಭಾಸ್ಕರ್ ಹಾಗೂ 2023ರ ದ್ವಿತೀಯ ಸಮ್ಮೇಳನದಲ್ಲಿ ಮಂಗಳೂರಿನ ಜೊಸ್ಸಿ ಪಿಂಟೊ ಕಿನ್ನಿಗೋಳಿ ಹಾಗೂ ಗೋವಾದ ರಾಜಯ್ ಪವಾರ್ ಸನ್ಮಾನಿತರಾಗಿದ್ದರು.
ಮೊದಲ ಸಮ್ಮೇಳನ ಮಂಗಳೂರು, ದ್ವಿತೀಯ ಮತ್ತು ಇದು ತೃತೀಯ ಗೋವಾದಲ್ಲಿ ರಾಷ್ಟ್ರೀಯ ಸಮ್ಮೇಳನಗಳು ನಡೆಯುತ್ತಲಿವೆ.
ಸ್ಥಳೀಯ ಗೋವಾದ ಕವಿಕೂಟ ಉಗ್ತೆಂ ಮೊಳಬ್ ಈ ಬಾರಿಯ ಸ್ಥಳೀಯ ಸಂಯೋಜಕ ಸಂಸ್ಥೆಯಾಗಿ ಸಮ್ಮೇಳನದ ಆಯೋಜನೆ ಮಾಡಲಿದೆ.
ಕಳೆದ 2023 ರ ಗೋವಾ ರಾಜ್ಯದ ‌ಕೊಂಕಣಿ ಲೇಖಕರ ಸಂಘ ಸಮ್ಮೇಳನ ಸಂಯೋಜನೆ ಮಾಡಿದ್ದರು.
ಆಖಿಲ ಭಾರತ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಸ್ಥಾಪಕ ಆಧ್ಯಕ್ಷ ರೇಮಂಡ್ ಡಿಕೂನಾ ತಾಕೊಡೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಈ ಬಾರಿ ಗೋವಾದ ವಿವೇಕ ಪಿಸೂಲೆಕರ್, ಗೌರೀಶ ವರ್ಣೇಕರ್, ಕಾರವಾರದ ಸಂದೇಶ ಬಾಂದೇಕರ್,ಈ ರಾಷ್ಟ್ರೀಯ ಸಮ್ಮೇಳನದ ಸಂಯೋಜನೆ ‌ಮಾಡಲು ರೇಮಂಡ್ ಡಿಕೂನಾ ತಾಕೊಡೆ ಜೊತೆಯಲ್ಲಿ ಸಂಚಾಲಕರಾಗಿ ಇದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು