1:58 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಚಟ್ನಿ ತರಹ ಮಡಿಕೇರಿ- ಚೆಟ್ಟಳ್ಳಿ ರಸ್ತೆ: ನಿರ್ಮಾಣಗೊಂಡು ಮೂರೇ ದಿನಗಳಲ್ಲಿ ಕುಸಿದು ಬಿದ್ದ ತಡೆಗೋಡೆ!

20/05/2022, 08:57

ಮಡಿಕೇರಿ (reporterkarnataka.com):ಮಡಿಕೇರಿಯಿಂದ ಚೆಟ್ಟಳ್ಳಿಗೆ ತೆರಳುವ ರಸ್ತೆ ಪಾಳುಬಿದ್ದು ಈ ವರ್ಷದ ಮಳೆಗಾಲಕ್ಕೆ ಮೂರು ವರ್ಷಗಳೇ ಕಳೆದುಹೋಗಿದೆ. 

ಸಿದ್ದಾಪುರ ಹಾಗು ಚೆಟ್ಟಳ್ಳಿಯ ಪ್ರಯಾಣಿಕರು ಶಾಲಾ ಕಾಲೇಜು ಮಕ್ಕಳು, ನೌಕರರು ತಮ್ಮ ಜೀವವನ್ನು ಪಣಕ್ಕಿಟ್ಟು ಪ್ರತಿನಿತ್ಯ ಮಡಿಕೇರಿ ಕಡೆ ಪಯಣಿಸಬೇಕಾಗಿದೆ. ಬೆಳಿಗ್ಗೆ ಹೋದವರು ಸಂಜೆ ಹೊತ್ತಿಗೆ ಮನೆ ಸೇರುವುದೇ ಗ್ಯಾರೆಂಟಿಲ್ಲದಾಗಿದೆ. 


ಈ ವರ್ಷ ಹಲವಾರು ಕೋಟಿ ಹಣ ವ್ಯಯ ಮಾಡಿ ರಸ್ತೆಗೆ ಲೋಕಾಪಯೋಗಿ ಇಲಾಖೆಯಿಂದ ತಡೆಗೋಡೆ ನಿರ್ಮಿಸಲಾಗಿದೆ. ಕೆಲಸ ಎಷ್ಟರಮಟ್ಟಿಗೆ ಕಳಪೆಯಾಗಿದೆ ಎಂದರೆ ತಡೆ ಗೋಡೆ ನಿರ್ಮಿಸಿದ ಮೂರು ದಿವಸಕ್ಕೆ ಕುಸಿಯಲು ಪ್ರಾರಂಭಿಸಿದೆ. ಈಗಾಗಲೇ ಮೊನ್ನೆಯಿಂದ ಸುರಿಯುತ್ತಿರುವ ಕೃತಿಕಾ ಮಳೆಗೆ ತಡೆಗೋಡೆ ಜೊತೆಯಲ್ಲಿಯೇ  ರಸ್ತೆಯು ಬಿರುಕುಬಿಟ್ಟಿದ್ದು ಕುಸಿಯಲು ಕಾಯುತಿದೆ. ಅದನ್ನು ಅರಿತ ಗುತ್ತಿಗೆದಾರರು ಜೆ. ಸಿ. ಬಿ. ಯಂತ್ರ ತಂದು ಮಣ್ಣು ಮುಚ್ಚಿ ಹೋಗಿದ್ದಾರೆ. 

ಅಂತೂ ಇಂತೂ ಲೋಕಾಪಯೋಗಿ ಅಭಿಯಂತರರು ಮತ್ತು ಗುತ್ತಿಗೆದಾರರು ತಮ್ಮ ತಟ್ಟೆಯಲ್ಲಿ *ಪಪ್ಪಡಂ*  *ಪಾಯಸಂ ಉಂಡು* ರಸ್ತೆಯಲ್ಲಿ ಅದನ್ನು ವಿಸರ್ಜಿಸಿದಂತೆ ಚೆಟ್ಟಳ್ಳಿ ಮಡಿಕೇರಿ ರಸ್ತೆಯಲ್ಲಿ ತೆರಳುವ ವಾಹನ ಸವಾರರಿಗೆ ಅನುಭವವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು