11:52 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಚಟ್ನಿ ತರಹ ಮಡಿಕೇರಿ- ಚೆಟ್ಟಳ್ಳಿ ರಸ್ತೆ: ನಿರ್ಮಾಣಗೊಂಡು ಮೂರೇ ದಿನಗಳಲ್ಲಿ ಕುಸಿದು ಬಿದ್ದ ತಡೆಗೋಡೆ!

20/05/2022, 08:57

ಮಡಿಕೇರಿ (reporterkarnataka.com):ಮಡಿಕೇರಿಯಿಂದ ಚೆಟ್ಟಳ್ಳಿಗೆ ತೆರಳುವ ರಸ್ತೆ ಪಾಳುಬಿದ್ದು ಈ ವರ್ಷದ ಮಳೆಗಾಲಕ್ಕೆ ಮೂರು ವರ್ಷಗಳೇ ಕಳೆದುಹೋಗಿದೆ. 

ಸಿದ್ದಾಪುರ ಹಾಗು ಚೆಟ್ಟಳ್ಳಿಯ ಪ್ರಯಾಣಿಕರು ಶಾಲಾ ಕಾಲೇಜು ಮಕ್ಕಳು, ನೌಕರರು ತಮ್ಮ ಜೀವವನ್ನು ಪಣಕ್ಕಿಟ್ಟು ಪ್ರತಿನಿತ್ಯ ಮಡಿಕೇರಿ ಕಡೆ ಪಯಣಿಸಬೇಕಾಗಿದೆ. ಬೆಳಿಗ್ಗೆ ಹೋದವರು ಸಂಜೆ ಹೊತ್ತಿಗೆ ಮನೆ ಸೇರುವುದೇ ಗ್ಯಾರೆಂಟಿಲ್ಲದಾಗಿದೆ. 


ಈ ವರ್ಷ ಹಲವಾರು ಕೋಟಿ ಹಣ ವ್ಯಯ ಮಾಡಿ ರಸ್ತೆಗೆ ಲೋಕಾಪಯೋಗಿ ಇಲಾಖೆಯಿಂದ ತಡೆಗೋಡೆ ನಿರ್ಮಿಸಲಾಗಿದೆ. ಕೆಲಸ ಎಷ್ಟರಮಟ್ಟಿಗೆ ಕಳಪೆಯಾಗಿದೆ ಎಂದರೆ ತಡೆ ಗೋಡೆ ನಿರ್ಮಿಸಿದ ಮೂರು ದಿವಸಕ್ಕೆ ಕುಸಿಯಲು ಪ್ರಾರಂಭಿಸಿದೆ. ಈಗಾಗಲೇ ಮೊನ್ನೆಯಿಂದ ಸುರಿಯುತ್ತಿರುವ ಕೃತಿಕಾ ಮಳೆಗೆ ತಡೆಗೋಡೆ ಜೊತೆಯಲ್ಲಿಯೇ  ರಸ್ತೆಯು ಬಿರುಕುಬಿಟ್ಟಿದ್ದು ಕುಸಿಯಲು ಕಾಯುತಿದೆ. ಅದನ್ನು ಅರಿತ ಗುತ್ತಿಗೆದಾರರು ಜೆ. ಸಿ. ಬಿ. ಯಂತ್ರ ತಂದು ಮಣ್ಣು ಮುಚ್ಚಿ ಹೋಗಿದ್ದಾರೆ. 

ಅಂತೂ ಇಂತೂ ಲೋಕಾಪಯೋಗಿ ಅಭಿಯಂತರರು ಮತ್ತು ಗುತ್ತಿಗೆದಾರರು ತಮ್ಮ ತಟ್ಟೆಯಲ್ಲಿ *ಪಪ್ಪಡಂ*  *ಪಾಯಸಂ ಉಂಡು* ರಸ್ತೆಯಲ್ಲಿ ಅದನ್ನು ವಿಸರ್ಜಿಸಿದಂತೆ ಚೆಟ್ಟಳ್ಳಿ ಮಡಿಕೇರಿ ರಸ್ತೆಯಲ್ಲಿ ತೆರಳುವ ವಾಹನ ಸವಾರರಿಗೆ ಅನುಭವವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು