2:57 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಚಟ್ನಿ ತರಹ ಮಡಿಕೇರಿ- ಚೆಟ್ಟಳ್ಳಿ ರಸ್ತೆ: ನಿರ್ಮಾಣಗೊಂಡು ಮೂರೇ ದಿನಗಳಲ್ಲಿ ಕುಸಿದು ಬಿದ್ದ ತಡೆಗೋಡೆ!

20/05/2022, 08:57

ಮಡಿಕೇರಿ (reporterkarnataka.com):ಮಡಿಕೇರಿಯಿಂದ ಚೆಟ್ಟಳ್ಳಿಗೆ ತೆರಳುವ ರಸ್ತೆ ಪಾಳುಬಿದ್ದು ಈ ವರ್ಷದ ಮಳೆಗಾಲಕ್ಕೆ ಮೂರು ವರ್ಷಗಳೇ ಕಳೆದುಹೋಗಿದೆ. 

ಸಿದ್ದಾಪುರ ಹಾಗು ಚೆಟ್ಟಳ್ಳಿಯ ಪ್ರಯಾಣಿಕರು ಶಾಲಾ ಕಾಲೇಜು ಮಕ್ಕಳು, ನೌಕರರು ತಮ್ಮ ಜೀವವನ್ನು ಪಣಕ್ಕಿಟ್ಟು ಪ್ರತಿನಿತ್ಯ ಮಡಿಕೇರಿ ಕಡೆ ಪಯಣಿಸಬೇಕಾಗಿದೆ. ಬೆಳಿಗ್ಗೆ ಹೋದವರು ಸಂಜೆ ಹೊತ್ತಿಗೆ ಮನೆ ಸೇರುವುದೇ ಗ್ಯಾರೆಂಟಿಲ್ಲದಾಗಿದೆ. 


ಈ ವರ್ಷ ಹಲವಾರು ಕೋಟಿ ಹಣ ವ್ಯಯ ಮಾಡಿ ರಸ್ತೆಗೆ ಲೋಕಾಪಯೋಗಿ ಇಲಾಖೆಯಿಂದ ತಡೆಗೋಡೆ ನಿರ್ಮಿಸಲಾಗಿದೆ. ಕೆಲಸ ಎಷ್ಟರಮಟ್ಟಿಗೆ ಕಳಪೆಯಾಗಿದೆ ಎಂದರೆ ತಡೆ ಗೋಡೆ ನಿರ್ಮಿಸಿದ ಮೂರು ದಿವಸಕ್ಕೆ ಕುಸಿಯಲು ಪ್ರಾರಂಭಿಸಿದೆ. ಈಗಾಗಲೇ ಮೊನ್ನೆಯಿಂದ ಸುರಿಯುತ್ತಿರುವ ಕೃತಿಕಾ ಮಳೆಗೆ ತಡೆಗೋಡೆ ಜೊತೆಯಲ್ಲಿಯೇ  ರಸ್ತೆಯು ಬಿರುಕುಬಿಟ್ಟಿದ್ದು ಕುಸಿಯಲು ಕಾಯುತಿದೆ. ಅದನ್ನು ಅರಿತ ಗುತ್ತಿಗೆದಾರರು ಜೆ. ಸಿ. ಬಿ. ಯಂತ್ರ ತಂದು ಮಣ್ಣು ಮುಚ್ಚಿ ಹೋಗಿದ್ದಾರೆ. 

ಅಂತೂ ಇಂತೂ ಲೋಕಾಪಯೋಗಿ ಅಭಿಯಂತರರು ಮತ್ತು ಗುತ್ತಿಗೆದಾರರು ತಮ್ಮ ತಟ್ಟೆಯಲ್ಲಿ *ಪಪ್ಪಡಂ*  *ಪಾಯಸಂ ಉಂಡು* ರಸ್ತೆಯಲ್ಲಿ ಅದನ್ನು ವಿಸರ್ಜಿಸಿದಂತೆ ಚೆಟ್ಟಳ್ಳಿ ಮಡಿಕೇರಿ ರಸ್ತೆಯಲ್ಲಿ ತೆರಳುವ ವಾಹನ ಸವಾರರಿಗೆ ಅನುಭವವಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು