5:38 AM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಚಾತುರ್ಮಾಸ ಪ್ರಯುಕ್ತ ಕಾಶೀ ಮಠಾಧೀಶರ ಪುರ ಪ್ರವೇಶ: ಮಂಗಳೂರಿನಲ್ಲಿ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

09/07/2022, 22:54

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):  ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತಾಚರಣೆಯು ಜುಲೈ 18ರಿಂದ  ಈ ಬಾರಿ ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದ್ದು, ಈ ಪ್ರಯುಕ್ತ ಶ್ರೀಗಳವರ ಪುರ ಪ್ರವೇಶ ಶನಿವಾರ ನಗರದ ರಥಬೀದಿಯಲ್ಲಿ ನಡೆಯಿತು. 

ಶ್ರೀಗಳವರು ಕೊಂಚಾಡಿ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಭವ್ಯ ಪೂರ್ಣಕುಂಭ ಸ್ವಾಗತ ನೀಡಲಾಯಿತು.  ಪುರ ಪ್ರವೇಶ ಕಾರ್ಯಕ್ರಮವು ಸ್ವದೇಶೀ ಸ್ಟೋರ್ಸ್ ಬಳಿಯಿಂದ ಪ್ರಾರಂಭಗೊಂಡು ಶ್ರೀ ದೇವಳದ ವರೆಗೆ ನಡೆಯಿತು. ಈ  ಸಂದರ್ಭದಲ್ಲಿ ವಿಶೇಷ ಚಂಡೆವಾದನ, ವಾರ್ಕರಿ ತಂಡದಿಂದ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಬಳಿಕ ಶ್ರೀಗಳವರು ಶ್ರೀ ದೇವರ ದರ್ಶನ ಪಡೆದು , ದೇವಳದ ಆಡಳಿತ ಮಂಡಳಿ ಯ ಪದಾಧಿಕಾರಿಗಳು ಪಾದಪೂಜೆ ನೆರವೇರಿಸಿದರು .  

ಇತ್ತೀಚಿನ ಸುದ್ದಿ

ಜಾಹೀರಾತು