6:13 AM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಯವರ ಚಾತುರ್ಮಾಸ್ಯ ನಾಳೆಯಿಂದ: ಧಾನ್ಯಲಕ್ಷಿ ಪೂಜೆ, ಮೃತ್ತಿಕೆ ಸಂಗ್ರಹ ಸಂಪನ್ನ

09/07/2025, 21:17

ಗೋಕರ್ಣ(reporterkarnataka.com): ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ಅಶೋಕೆಯ ಸೇವಾಸೌಧ- ಗುರುದೃಷ್ಟಿ ಆವರಣದಲ್ಲಿ ಜುಲೈ 10 ಗುರುವಾರ ಆರಂಭವಾಗಲಿದ್ದು, ಪೂರ್ವಭಾವಿಯಾಗಿ ಬುಧವಾರ ಮೃತ್ತಿಕಾ ಸಂಗ್ರಹ, ಧಾನ್ಯಲಕ್ಷ್ಮಿ ಪೂಜೆ ಶ್ರೀಗಳ ಸ್ವಾಗತ ಕಾರ್ಯಕ್ರಮ ನೆರವೇರಿತು.
ವಿಶ್ವಾವಸು ಸಂವತ್ಸರದ ಚಾತುರ್ಮಾಸ್ಯವನ್ನು ಶ್ರೀಗಳು ಸ್ವಭಾಷಾ ಚಾತುರ್ಮಾಸ್ಯವನ್ನಾಗಿ ಆಚರಿಸಲಾಗುತ್ತಿದ್ದು, ಶ್ರೀಗಳ ವ್ರತಾರಂಭದ ಮುನ್ನಾ ದಿನ ಪುರಾತನ ಶ್ರೀ ಮಲ್ಲಿಕಾರ್ಜುನ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಚಾತುರ್ಮಾಸ್ಯ ನಿರ್ವಿಘ್ನವಾಗಿ ಮತ್ತು ಪರಿಪೂರ್ಣವಾಗಿ ನಡೆಯುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ನಂತರ ವಿದ್ಯಾನಂದ ಆವರಣದಲ್ಲಿ ಧಾನ್ಯಲಕ್ಷ್ಮಿ ಪೂಜೆ ನೆರವೇರಿತು. ಚಾತುರ್ಮಾಸ್ಯಕ್ಕಾಗಿ ರಾಜ್ಯದ ವಿವಿಧೆಡೆಗಳಿಂದ ಭಕ್ತರು ಕಳುಹಿಸಿಕೊಟ್ಟಿರುವ ಸುವಸ್ತುಗಳನ್ನು ಪೂಜಿಸಿ ಚಾತುರ್ಮಾಸ್ಯದ ಎಲ್ಲ ದಿನ ನಡೆಯುವ ಅನ್ನ ಸಂತರ್ಪಣೆಗೆ ಚಾಲನೆ ನೀಡಲಾಯಿತು. ಚಾತುರ್ಮಾಸ್ಯ ಅವಧಿಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಶಿಷ್ಯಭಕ್ತರಿಗೆ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿದೆ.
ಧಾನ್ಯಲಕ್ಷ್ಮಿ ಪೂಜೆಯ ಬಳಿಕ ಶ್ರೀಗಳು ಮೂಲಮಠ ಪರಿಸರಕ್ಕೆ ತೆರಳಿ ಸಾಂಪ್ರದಾಯಿಕ ಮೃತ್ತಿಕೆ ಸಂಗ್ರಹಿಸಿದರು. ಮೃತ್ತಿಕೆಯೊಂದಿಗೆ ಆಗಮಿಸಿದ ಪರಮಪೂಜ್ಯರನ್ನು ಅಶೋಕೆಯ ಯಾನಶಾಲೆ ಆವರಣಲ್ಲಿ ಭವ್ಯವಾಗಿ ಸ್ವಾಗತಿಸಲಾಯಿತು.
ದೇಶದಲ್ಲಿ ಸ್ವಭಾಷಾಭಿಮಾನ ಹಾಗೂ ರಾಷ್ಟ್ರಪ್ರಜ್ಞೆ ಉದ್ದೀಪಿಸಲು ಮತ್ತು ದೇಶದ ಸಂಸ್ಕøತಿ-ಪರಂಪರೆಯನ್ನು ಉಳಿಸುವ ಉದ್ದೇಶದಲ್ಲಿ ಸ್ವಭಾಷೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಚಾತುರ್ಮಾಸ್ಯವನ್ನು ಆಚರಿಸುತ್ತಿರುವುದು ಇದೇ ಮೊದಲು.
ಡಿ.ಡಿ.ಶರ್ಮಾ, ಸತ್ಯನಾರಾಯಣ ಶರ್ಮಾ, ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ನಿಯೋಜಿತ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಪ್ರಧಾನ ಸಂಯೋಜಕ ಮಂಜುನಾಥ ಸುವರ್ಣಗದ್ದೆ, ಸೇವಾಬಿಂದುಗಳಾದ ಶ್ರೀಕಾಂತ್ ಪಂಡಿತ್, ಜಿ.ಕೆ.ಹೆಗಡೆ ಗೋಳಗೋಡು, ಅರವಿಂದ ಧರ್ಬೆ, ಸುಬ್ರಾಯ ಭಟ್, ಆರ್.ಜಿ.ಹೆಗಡೆ, ಗಣೇಶ್ ಭಟ್, ಸ್ವಾತಿ ಭಾಗ್ವತ್, ಜಿ.ವಿ.ಹೆಗಡೆ, ಲಲಿತಾ ಹೆಬ್ಬಾರ್, ರಾಜೀವ್ ಹೆಗಡೆ ಶ್ರೀಕಾರ್ಯದರ್ಶಿ ಮಧು ಜಿ.ಕೆ, ಶ್ರೀಮಠದ ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು