5:41 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಚೀನಾದಲ್ಲಿ ನಡೆಯುವ ಏಷ್ಯನ್ ಗೇಮ್ಸ್: ಐಸ್ ಸ್ಕೇಟಿಂಗ್‌ ಗೆ ಕಡಲನಗರಿ ಮಂಗಳೂರಿನ ಅಣ್ಣ-ತಂಗಿ ಆಯ್ಕೆ

05/02/2025, 11:43

ಮಂಗಳೂರು(reporterkarnataka.com): ಚೀನಾದ ಹಾರ್ಬಿನ್‌ನಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಚಳಿಗಾಲದ ಏಷ್ಯನ್‌ ಗೇಮ್ಸ್‌ 2025ರ ಐಸ್‌ ಸ್ಕೇಟಿಂಗ್‌ ತಂಡಕ್ಕೆ ಮಂಗಳೂರಿನ ಅಣ್ಣ-ತಂಗಿ ಆಯ್ಕೆಯಾಗಿದ್ದು ಭಾರತವನ್ನು ಪ್ರತಿನಿಧಿಸಲಿದ್ದಾರೆ.



ಡೇನಿಯಲ್‌ ಸಲ್ವಡೋರೆ ಕೊನ್ಸೆಸಾವ್‌ ಹಾಗೂ ಡ್ಯಾಶಿಯಲ್‌‌ ಅಮಂಡಾ ಕೊನ್ಸೆಸಾವ್‌ ಏಷ್ಯನ್‌ ಗೇಮ್ಸ್‌ ಗೆ ಆಯ್ಕೆಗೊಂಡಿದ್ದಾರೆ.
ಥಾಯ್ಲೆಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಡೇನಿಯಲ್‌ ಹಾಗೂ ಡ್ಯಾಶಿಯಲ್ ಅಂತಿಮವಾಗಿ ಭಾರತೀಯ ಐಸ್‌ ಸ್ಕೇಟಿಂಗ್‌ ತಂಡಕ್ಕೆ ಆಯ್ಕೆಯಾದರು. ಇವರು ಮಂಗಳೂರಿನ ಫ್ರಾನ್ಸಿಸ್‌ ಮತ್ತು ಡೋರಿಸ್‌ ಕೊನ್ಸೆಸಾವ್‌ ದಂಪತಿಯ ಮಕ್ಕಳಾಗಿದ್ದು, ಡೇನಿಯಲ್‌ ಕೊನ್ಸೆಸಾವ್‌ ಸಂತ ಜೋಸೆಫ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ತೃತೀಯ ವರ್ಷದ ಬಿ.ಇ. ವಿದ್ಯಾಭ್ಯಾಸ ಪಡೆಯುತ್ತಿದ್ದರೆ,ಡ್ಯಾಶಿಯಲ್‌ ಎಸ್‌ಡಿಎಂ ಕಾಲೇಜಿನ ಪ್ರಥಮ ವರ್ಷದ ಬಿಬಿಎ ವಿದ್ಯಾರ್ಥಿನಿಯಾಗಿದ್ದಾಳೆ. ಇವರಿಬ್ಬರೂ ಬಾಲ್ಯದಿಂದಲೇ ಸ್ಕೇಟಿಂಗ್‌ ರಿಂಕ್‌ನಲ್ಲಿ ಅದ್ಭುತ ಸಾಧನೆ ಮೆರೆಯುತ್ತಾ ಬಂದಿದ್ದಾರೆ.
ಮಂಗಳೂರಿನ ಹೈಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ನ ಸದಸ್ಯರಾಗಿರೋ ಇವರಿಬ್ಬರಿಗೂ ರೋಲರ್‌ ಸ್ಕೇಟಿಂಗ್‌ ನಲ್ಲಿ ಮೋಹನ್‌ದಾಸ್‌ ಕೆ. ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ತರಬೇತಿ ನೀಡುತ್ತಿದ್ದಾರೆ‌.ಐಸ್‌ ಸ್ಕೇಟಿಂಗ್‌ನಲ್ಲಿ ಕೆ. ಶ್ರೀಕಾಂತ್‌ ರಾವ್‌ ಮೈಸೂರು ಹಾಗೂ ಐಸ್‌ ಸ್ಕೇಟಿಂಗ್‌ ಅಸೋಸಿಯೇಶನ್‌ ಆಫ್ ಇಂಡಿಯಾ ತರಬೇತಿ ನೀಡಿರುತ್ತಾರೆ.ಡೇನಿಯಲ್‌ ಹಾಗೂ ಡ್ಯಾಶಿಯಲ್‌ ಕ್ರಮವಾಗಿ ಚೀನಾದ ಹಾರ್ಬಿನ್‌ ಮತ್ತು ದಕ್ಷಿಣ ಕೊರಿಯಾದಲ್ಲಿ ಒಂದು ತಿಂಗಳ ನ ಕಾಲ ಐಸ್‌ ಸ್ಕೇಟಿಂಗ್‌ನ ತರಬೇತಿ ಪಡೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು