10:11 AM Thursday17 - April 2025
ಬ್ರೇಕಿಂಗ್ ನ್ಯೂಸ್
ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ…

ಇತ್ತೀಚಿನ ಸುದ್ದಿ

Cheetah | ಅರಣ್ಯ ಇಲಾಖೆಯಲ್ಲಿ ತಕ್ಷಣಕ್ಕೆ ಲಭ್ಯವಿಲ್ಲದ ಅರಿವಳಿಕೆ ತಜ್ಞರು: ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣಬಿಟ್ಟ ಚಿರತೆ

21/02/2025, 22:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟಿದೆ.
ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆ ರಕ್ಷಣೆಗೆ ಪ್ರಯತ್ನಿಸಿದರು. 
ಶಿವಮೊಗ್ಗದಿಂದ ಅರಿವಳಿಕೆ ತಜ್ಞರನ್ನು ಕರೆಸಿ ರಕ್ಷಣೆ ಮಾಡಲು ಮುಂದಾದರು. ಅಷ್ಟರಲ್ಲಿ ಚಿರತೆ ಉಸಿರಾಟ ನಿಲ್ಲಿಸಿದ್ದು, ಮೃತಪಟ್ಟಿದೆ ಎಂದು ಅಧಿಕಾರಿಗಳು ಘೋಷಣೆ ಮಾಡಿದರು. ಉರುಳು ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಸೊಂಟಕ್ಕೆ ಇಳಿದಿದ್ದ ಉರುಳು ಮತ್ತಷ್ಟು ಬಿಗಿಯಾಗಿ ಚಿರತೆ ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದರು.
ಕಾಡು ಹಂದಿಗೆ ಹಾಕಿರುವ ಉರುಳಿಗೆ ಚಿರತೆ ಸಿಲುಕಿರುವ ಸಾಧ್ಯತೆ ಇದೆ. ಮೊದಲಿಗೆ ಕಾಫಿ ತೋಟದ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು. ಮರಣೋತ್ತರ ಪರೀಕ್ಷೆ ಬಳಿಕ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು